Wednesday, April 10, 2024

ಸಾಂಕ್ರಾಮಿಕ ರೋಗಗಳ ತಡೆಗೆ ಸಮುದಾಯದ ಸಹಕಾರ ಅಗತ್ಯ: ದ.ಕ.ಜಿಲ್ಲಾ ಆರೋಗ್ಯಾಧಿಕಾರಿ ಡಾ|ಕಿಶೋರ್

ಬಂಟ್ವಾಳ: ಹಲವು ಸವಾಲುಗಳನ್ನು ಎದುರಿಸಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಕೆಲಸ ಮಾಡುತ್ತಿದ್ದು, ಸಾಂಕ್ರಾಮಿಕ ರೋಗಗಳ ತಡೆಗೆ ಸಮುದಾಯದ ಸಹಕಾರ ಅತೀ ಅಗತ್ಯವಾಗಿದೆ ಎಂದು ದ.ಕ.ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಆಶ್ರಯದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದನ್ವಯ ಬುಧವಾರ ಆಯೋಜಿಸಲಾಗಿದ್ದ ಪತ್ರಕರ್ತರಮಾಹಿತಿ ಕಾರ್ಯಾಗಾರದಲ್ಲಿ ಅವರು ಭಾಗವಹಿಸಿ ಮಾತನಾಡಿದರು.

ಕೊರೊನಾ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಡಿಮೆಯಾಗಿದೆ, ಸುಸಜ್ಜಿತ ಆರೋಗ್ಯ ವ್ಯವಸ್ಥೆಯ ಕಾರಣದಿ‌ಂದ ಹೊರಜಿಲ್ಲೆಯವರು ನಮ್ಮ ಜಿಲ್ಲೆಗೆ ಬಂದು ದಾಖಲಾಗುವ ಕಾರಣ, ಸಾವಿನ ಸಂಖ್ಯೆಯಲ್ಲಿ ಆ ಭಾಗದವರೂ ಸೇರ್ಪಡೆಯಾಗುತ್ತಾರೆ. ಕೊರೊನಾ ಎರಡನೇ ಅಲೆ ಸಂದರ್ಭ ಜಿಲ್ಲೆಯಲ್ಲಿ ಎಲ್ಲಿಯೂ ಆಸ್ಪತ್ರೆಯ ಕೊರತೆ, ಆಕ್ಸಿಜನ್ ಕೊರತೆಯಾಗಲೀ ಆಗಿಲ್ಲ, ಸಂಭಾವ್ಯ ಮೂರನೇ ಅಲೆ ಎದುರಿಸಲೂ ಇಲಾಖೆ ಸನ್ನದ್ಧವಾಗಿದ್ದು, ತನ್ನ ಇತರ ಕಾರ್ಯಗಳ ನಡುವೆ ಇಲಾಖೆ ಹೆಚ್ಚಿನ ಮುತುವರ್ಜಿ ವಹಿಸಿದೆ ಎಂದರು.

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ ಮಾಂಬಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಂಪನ್ಮೂಲ‌ವ್ಯಕ್ತಿಯಾಗಿ ಆಗಮಿಸಿದ್ದ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ಮಾತನಾಡಿ, ನಿಂತಿರುವ ಸ್ವಚ್ಛ ನೀರಿನಲ್ಲಿ ಹುಟ್ಟಿಕೊಳ್ಳುವ ಸೊಳ್ಳೆಗಳಯ ಮಲೇರಿಯಾ ಮತ್ತು ಡೆಂಘೆ ರೋಗಗಳ ತೀವ್ರತೆಗೆ ಕಾರಣವಾಗುತ್ತದೆ. ಈ ಹಂತದಲ್ಲಿ ಇಲಾಖೆಗಳು ಎಷ್ಟು ಕಾಳಜಿ ವಹಿಸಿದರೂ ಅದಕ್ಕಿಂತ ಮುಖ್ಯವಾಗಿ ಜನರು ಜಾಗೃತಿ ವಹಿಸುವುದು ಅತೀ ಅಗತ್ಯ ಎಂದರು. ಸೊಳ್ಳೆ ಉತ್ಪತ್ತಿಯಾಗುವುದನ್ನು ನಿಯಂತ್ರಣಗೊಳಿಸಿದರೆ, ಮಲೇರಿಯಾ ಡೆಂಘೆಯನ್ನು ಕಡಿಮೆ ಮಾಡಬಹುದು.ಫಾಗಿಂಗ್ ಅಥವಾ ಇತರ ತಾತ್ಕಾಲಿಕ ಪರಿಹಾರಗಳ ಬದಲು ರೋಗವಾಹಕಗಳ ನಾಶ ಮಾಡಬೇಕು, ಮಹಡಿ ಮೇಲೆ ನಿಂತ ನೀರು, ಎಸೆದ ತ್ಯಾಜ್ಯ, ಮಳೆ ನೀರು ನಿಂತ ಜಾಗಗಳು ಸೊಳ್ಳೆಯುತ್ಪಾದನೆಗೆ ಪೂರಕವಾಗಿದ್ದು, ಸೊಳ್ಳೆಯ ಕುರಿತು ಗಂಭೀರವಾಗಿ ಜನರು ಜಾಗೃತಗೊಂಡರೆ ಮಲೇರಿಯಾ ನಿಯಂತ್ರಣ ಸಾಧ್ಯ ಎಂದರು. ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು ಸ್ವಾಗತಿಸಿ, ವಂದಿಸಿದರು. ತಾಲೂಕು ಆರೋಗ್ಯ ನಿರೀಕ್ಷಕಿ ಕುಸುಮಾ‌ ಉಪಸ್ಥಿತರಿದ್ದರು.

More from the blog

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...