Friday, April 5, 2024

ಸನ್ಯಾಸತ್ವದಲ್ಲಿ ಅದ್ವಿತೀಯ ಸಾಧನೆ ಸಾಗ ಸಾಧು ಧೀಕ್ಷೆ ಪಡೆದ ಬಡಗಬೆಳ್ಳೂರಿನ ಸಂತ

ಬಂಟ್ವಾಳ: ಹುಟ್ಟು ಸಾವಿನ ಮಧ್ಯೆ ಸಾಧನೆಯ ಮೂಲಕ ಸಮಾಜಕ್ಕೆ ಸಮರ್ಪಣೆಯಾಗಬೇಕು, ಆಧ್ಯಾತ್ಮದ ಮೂಲಕ ಜೀವನಕ್ಕೆ ಅಂತಿಮ ರೂಪ ನೀಡಬೇಕು ಎಂಬ ಛಲದಿಂದ ಸನ್ಯಾಸ ವೃತವನ್ನು ಆಯ್ಕೆ ಮಾಡಿದ ವಿಶೇಷ ವಾಗಿ ತುಳುನಾಡಿನ ಅಪರೂಪದ ನಾಗಸಾಧು ಓರ್ವ ರ ಡಿಟೈಲ್ ಸ್ಟೋರಿ ನಿಮ್ಮ ಮುಂದೆ ಇದೆ.

ಬಡಬೆಳ್ಳೂರಿನ ದಿ| ರುಕ್ಮಯ ಪೂಜಾರಿಯವರ ಪುತ್ರರಾಗಿರುವ ವಿಠಲ್ ಪೂಜಾರಿ ಅವರೇ ನಾಗಸಾಧು ದೀಕ್ಷೆ ಸ್ವೀಕರಿಸಿರುವ ಸಂತ. ಬಾಲ್ಯದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನಾಗಿದ್ದು, ಮೈಸೂರಿನಲ್ಲಿ ಧರ್ಮ ಜಾಗರಣದ ಪ್ರಚಾರಕನಾಗಿ ಕೆಲಸ ಮಾಡಿರುವ ಜತೆಗೆ ಆರ್‌ಎಸ್‌ಎಸ್‌ನಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.

ಬೆಳ್ತಂಗಡಿಯ ವೀರಕೇಸರಿ ಸಂಘಟನೆಯ ಸದಸ್ಯನಾಗಿಯೂ ದುಡಿದಿದ್ದು, ಸಂಘಟನೆಯ ಪದ್ಮನಾಭ ಪೂಜಾರಿ ಸೇರಿದಂತೆ ಮೊದಲಾದವರು ತನಗೆ ನೀಡಿದ ಸಹಕಾರವನ್ನು ಸ್ಮರಿಸುತ್ತಾರೆ.

ಹರಿದ್ವಾರ ಕುಂಭಮೇಳದಲ್ಲಿ ತಪೋನಿಧಿ ಪಂಚಾಯಿತಿ ಆನಂದ್ ಅಖಾಡದ ಪರಮಹಂಸ ಬಾಬಾ ಶ್ರೀ ಬನ್ಖಂಡಿ ಮಹಾರಾಜ್ ಜೀ ಅವರ ಶಿಷ್ಯವಾಗಿ ದೀಕ್ಷೆ ಪಡೆದಿದ್ದು, ತಪೋನಿಧಿ ಬಾಬಾ ವಿಠ್ಠಲ್‌ಗಿರಿ ಮಹಾರಾಜ್ ಜೀ ಎಂಬ ಆಧ್ಯಾತ್ಮದ ಹೆಸರನ್ನು ಪಡೆದಿದ್ದಾರೆ.

ಉತ್ತರ ಭಾರತದ ಬದ್ರಿನಾಥ್, ಹರಿದ್ವಾರ, ಕೇದರ್‌ನಾಥಗಳಿಗೆ ಯಾತ್ರೆ ಮಾಡುತ್ತಾ ಕುಠೀರದಲ್ಲಿ ವಾಸವಾಗಿ ಆಧ್ಯಾತ್ಮದ ಸಾಧನೆ ಮಾಡುತ್ತಿದ್ದಾರೆ.

ನಾಗ ಸಾಧು ಪದವಿ ಸ್ವೀಕರಿಸಿರುವ ಬಾಬಾ ವಿಠ್ಠಲ್‌ಗಿರಿ ಮಹಾರಾಜ್ ಪ್ರತಿಕ್ರಿಯಿಸಿ, ತಾನು ಪ್ರಚಾರವನ್ನು ಬಯಸುವುದಿಲ್ಲ. ದೇವರು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದ್ದು, ಪರಿಶ್ರಮದ ಫಲವಾಗಿ ಗುರುಗಳು ಧೀಕ್ಷೆ ನೀಡಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ಜೀವನದುದ್ದಕ್ಕೂ ಬೆಂಬಲ ನೀಡಿದ್ದು, ಮೈಸೂರಿನಲ್ಲಿ ಧರ್ಮಜಾಗರಣದ ಪ್ರಚಾರಕನಾಗಿಯೂ ಕೆಲಸ ಮಾಡಿದ್ದೇವೆ.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...