Sunday, April 7, 2024

ತುಂಬೆಯಲ್ಲಿ ಕೋವಿಡ್ ವಾರಿಯರ್‌ಗೆ ಸನ್ಮಾನ

ಡಾ|| ಬಿ. ಅಹಮ್ಮದ್ ಹಾಜಿ ಮುಹಿಯುದ್ದೀನ್ ಅವರು ತಮ್ಮ ಜೀವನವಿಡೀ ಶಿಸ್ತು, ಸಂಯಮವೇ ಮುಂತಾದ ಆದರ್ಶಗಳಿಂದ ಸಮಾಜದ ಎಲ್ಲಾ ಸ್ತರದ  ಜನರಿಗೆ ಬೇಕಾದವರಾಗಿದ್ದರು. ಅವರ ಆದರ್ಶದ ಗುಣಗಳನ್ನು ಇರಿಸಿಕೊಂಡು ನಾವೆಲ್ಲಾ ಮುನ್ನಡೆಯಬೇಕಾಗಿದೆ ಎಂಬುದಾಗಿ ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಹಾಗೂ ಬಿ.ಎ.ಗ್ರೂಪ್ ಆಫ್ ಇಂಡಸ್ಟ್ರೀಸ್‌ನ ನಿರ್ದೇಶಕರಾದ ಅಬ್ದುಲ್ ಸಲಾಂ ಅವರು ಹೇಳಿದರು.
ಅವರು ಪುದು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ೧೫ ವರ್ಷಗಳಿಂದ ಜೂನಿಯರ್ ಲ್ಯಾಬ್ ಟೆಕ್ನಿಕಲ್ ಆಫೀಸ್‌ರ್ ಆಗಿ ಸೇವೆ
ಸಲ್ಲಿಸುತ್ತಿರುವ ಮತ್ತು ಪ್ರಸಕ್ತ ಕೋವಿಡ್ ವಾರಿಯರ್ ಆಗಿ ಶ್ರಮಿಸಿ ಜನ ಮೆಚ್ಚುಗೆ ಗಳಿಸಿದ ಮುಸ್ತಫಾ ಅವರನ್ನು ಕೋವಿಡ್ ವೀರ ಎಂದು
ಪ್ರಶಂಸಿಸಿ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್‌ನ ಟ್ರಸ್ಟೀ ಭೀಫಾತಿಮ ಅಹ್ಮದ್ ಹಾಜಿ ಅವರನ್ನು ತುಂಬೆ ವಿದ್ಯಾ ಸಂಸ್ಥೆಗಳ ವತಿಯಿಂದ  ಸನ್ಮಾನಿಸಲಾಯಿತು. ಇತ್ತೀಚೆಗೆ ವೇತನಾ ಅನುದಾನಕ್ಕೆ ಒಳಪಟ್ಟ ಬೇಬಿ ಹಾಗೂ ಸಾಯಿರಾಂ ಜೆ ನಾಯಕ್ ಅವರನ್ನು ಅಬ್ದುಲ್ ಸಲಾಂ ಅವರು ಗೌರವಿಸಿದರು.
ಟ್ರಸ್ಟೀಗಳಾದ ಬಿ.ಎಂ ಅಶ್ರಫ್, ಪಿ.ಟಿ.ಎ. ಅಧ್ಯಕ್ಷ ಬಶೀರ್ ತಂಡೇಲ್, ಉಪಾಧ್ಯಕ್ಷ ನಿಸಾರ್ ಅಹಮ್ಮದ್, ತುಂಬೆ ಐಟಿಐಯ ಪ್ರಾಂಶುಪಾಲ ನವೀನ್  ಕುಮಾರ್, ಬ್ಯಾಂಕ್ ಆಫ್ ಬರೋಡಾ ಬ್ರಾಂಚ್‌ನ ಮ್ಯಾನೆಜರ್ ಸಂದೀಪ್ ಉಪಸ್ಥಿತರಿದ್ದ ಸಮಾವೇಶದಲ್ಲಿ ತುಂಬೆ ಕಾಲೇಜಿನ ಪ್ರಾಂಶುಪಾಲರಾದ ಕೆ.ಎನ್.ಗಂಗಾದರ ಆಳ್ವ ಪ್ರಸ್ತಾವಿಸಿ ಗೌರವಿಸಿದರು. ಯೋಗೀಶ್ ಬೊಳ್ಳಾರಿ ಆನ್‌ಲೈನ್ ತರಗತಿ ನಡೆಸುವ ಕುರಿತು ಪ್ರಾತ್ಯಕ್ಷತೆ ನೀಡಿದರು. ತುಂಬೆ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ್ ಕೆ ವಂದಿಸಿ, ಕಛೇರಿ ಅದೀಕ್ಷಕರಾದ ಅಬ್ದುಲ್ ಕಬೀರ್ ಕಾರ್ಯಕ್ರಮ ನಿರೂಪಿಸಿದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...