ಬಂಟ್ವಾಳ: ಅತ್ತಿಗೆಯ ಜತೆಗೆ ಅನೈತಿಕ ಸಂಬಂಧವಿದೆ ಎಂಬ ಆರೋಪದಿಂದ ತಮ್ಮನನ್ನು ಅಣ್ಣ ಸಲಾಕೆಯಿಂದ ಹೊಡೆದು ಕೊಲೆ ಮಾಡಿದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಎಸ್.ಐ. ಅವಿನಾಶ್ ನೇತ್ರತ್ವದ ತಂಡ ಬೊಂಡಾಲ ತಿರುವಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ, ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆ ನಿವಾಸಿ ರವಿ ಬಂಧಿತ ಆರೋಪಿ.
ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆ ನಿವಾಸಿ ಸುಂದರ(೩೦) ಎಂಬಾತನ ನ್ನು
ಶುಕ್ರವಾರ ತಡರಾತ್ರಿ ಕೊಲೆ ಮಾಡಿ ಅರೋಪಿ ರವಿ ಪರಾರಿಯಾಗಿದ್ದ.
*ಕೊಲೆಗೆ ಕಾರಣ?*
ಕೊಲೆಯಾದ ಸುಂದರ ಅವಿವಾಹಿತವಾಗಿದ್ದು, ಮನೆಯಲ್ಲಿ ಒಬ್ಬನೇ ವಾಸವಾಗಿದ್ದ. ಆತನ ಮನೆಯ ಸಮೀಪದಲ್ಲಿ ಅಣ್ಣನ ಮನೆಯಿದ್ದು, ಅಲ್ಲಿಂದ ಅತ್ತಿಗೆ ಊಟ- ತಿಂಡಿ ನೀಡುತ್ತಿದ್ದರು.
ಸುಂದರನಿಗೂ ಆತನ ಅತ್ತಿಗೆಗೂ ಅನೈತಿಕ ಸಂಬಂಧವಿದೆ ಎಂದು ಆರೋಪಿಸಿ ಆತನ ಅಣ್ಣ ರವಿಗೂ ಪದೇ ಪದೇ ಜಗಳ ನಡೆಯುತ್ತಲೇ ಇತ್ತು.
ಶುಕ್ರವಾರ ತಡರಾತ್ರಿಯೂ ಅವರ ಮಧ್ಯೆ ಜಗಳ ನಡೆದಿದ್ದು, ಸುಂದರ ಬೊಬ್ಬೆ ಹೊಡೆಯುವುದನ್ನು ಕೇಳಿ ಮತ್ತೋರ್ವ ಅಣ್ಣ ರಮೇಶ ಅವರು ಹೋಗಿ ನೋಡಿದಾಗ, ರವಿಯು ಸುಂದರನಿಗೆ ಅಡಿಕೆ ಸಲಾಕೆಯಿಂದ ತಲೆಗೆ ಹೊಡೆದಿದ್ದು, ಆತ ರಕ್ತದ ಮಡುವಿನಲ್ಲಿ ಬಿದ್ದಿದ್ದನು. ಆರೈಕೆ ಮಾಡುತ್ತಿದ್ದಂತೆ ಮೃತಪಟ್ಟಿದ್ದಾನೆ. ಈ ವೇಳೆ ಆರೋಪಿ ರವಿಯು ಓಡಿ ಹೋಗಿ ತಲೆಮರೆಸಿಕೊಂಡಿದ್ದ.
ಬಂಟ್ವಾಳ ನಗರ ಪೊಲೀಸರು ಕಾರ್ಯಚರಣೆ ನಡೆಸಿ ಆರೋಪಿ ರವಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ದ್ದಾರೆ.