ಬೊಮ್ಮಾಯಿ ಅವರ ಸಚಿವ ಸಂಪುಟದ ಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ರಾಜ್ಯದ ಹೈಕಮಾಂಡ್ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಅವರ ಕಾಲಿಗೆ ಬಿದ್ದ ಆರ್ಶೀವಾದ ಪಡೆದರು.
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಆಗಮಿಸಿ ಡಾ|ಪ್ರಭಾಕರ ಭಟ್ ಅವರನ್ನು ಭೇಟಿ ಮಾಡಿ ಕಾಲಿಗೆ ಮುಟ್ಟಿ ನಮಸ್ಕಾರ ಮಾಡಿದ ಸಂದರ್ಭದಲ್ಲಿ ಶಾಲು ಹೊದಿಸಿ ಸಿಹಿತಿಂಡಿ ಬಾಯಿಗೆ ತಿನ್ನಿಸಿದರು.
ಬಳಿಕ ಗೌಪ್ಯ ವಾಗಿ ಕೆಲ ಹೊತ್ತು ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು.
ನೂತನ ಸಚಿವ ಸ್ಥಾನದಲ್ಲಿ ಉತ್ತಮ ರೀತಿಯಲ್ಲಿ ಕೆಲಸ ಕಾರ್ಯ ಗಳನ್ನು ಮಾಡುವಂತೆ ಆರ್ಶೀವಾದ ಮಾಡಿದರು.