Thursday, October 26, 2023

ಭೂಗತ ಜಗತ್ತಿನ ವ್ಯಕ್ತಿಯ ಹೆಸರಿನಲ್ಲಿ ಹಣ ಬೇಡಿಕೆ ಪ್ರಕರಣ ನ್ಯಾಯಾಲಯದಲ್ಲಿ ರದ್ದು

Must read

ಬಂಟ್ವಾಳ: ವಿಟ್ಲ‌ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷಿಕರೊಬ್ಬರ ಮೊಬೈಲ್ ಗೆ ರವಿ ಪೂಜಾರಿ ಹೆಸರು ಹೇಳಿಕೊಂಡು 25 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟು ಕೊಡದೇ ಇದ್ದರೆ ಜೀವ ಬೆದರಿಕೆ ಒಡ್ಡಿರುವ ಪ್ರಕರಣವನ್ನು ‌ಬಂಟ್ವಾಳ ಜೆಎಂಎಫ್ ಸಿ ನ್ಯಾಯಾಲಯ‌ ರದ್ದು ಪಡಿಸಿದೆ.

ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಾತೃಶ್ರೀ ಕೃಪಾ ನಿವಾಸಿ ವೆಂಕಟರಮಣ ಭಟ್ ಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಈಗ ನ್ಯಾಯಾಲಯದಲ್ಲಿ ದೂರುದಾರರು ಪ್ರಕರಣವನ್ನು ಮುಂದುವರಿಸದಿರಲು ನಿರ್ಧರಿಸಿದ ಕಾರಣ ಪ್ರಕರಣ ರದ್ದುಗೊಳ್ಳುವ ಮೂಲಕ ಇತ್ಯರ್ಥಗೊಂಡಂತಾಗಿದೆ.

More articles

Latest article