ಕನ್ನಡ ನಾಡು-ನುಡಿ ಬೆಳವಣಿಗೆಗೆ ಎಲ್ಲರೂ ಮನಸ್ಸು ಮಾಡಿದಾಗ ಮಾತ್ರ ಕನ್ನಡ ಭಾಷೆ ಉಳಿಯುತ್ತದೆ. ಕನ್ನಡ ಭಾಷೆಯ ಬೆಳವಣಿಗೆಗೆ ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನವನ್ನು ನಡೆಸಬೇಕು. ವಿದ್ಯಾರ್ಥಿಗಳು ಕನ್ನಡ ಮಾತಾಡಲು ಸಮರ್ಪಕವಾಗಿ ಜ್ಞಾನವನ್ನು ಬಳಸಿಕೊಳ್ಳಬೇಕು. ನಮ್ಮ ಸಂಸ್ಥೆಯ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕನ್ನಡದಲ್ಲಿ ವ್ಯವಹರಿಸುತ್ತಿರುವುದು ಸಂತೋಷದ ವಿಷಯವಾಗಿದೆ ಎಂದು ಸಾಹಿತ್ಯ ಪರಿಷತ್ನ ಸದಸ್ಯರು, ಕನ್ನಡ ಉಪನ್ಯಾಸಕರಾದ ಅಬ್ದುಲ್ ರಹಿಮಾನ್ ಡಿ. ಬಿ. ಇವರು ಅಭಿಪ್ರಾಯಪಟ್ಟರು.
ಅವರು ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 66ನೇ ಕನ್ನಡ ರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ
ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಎನ್. ಗಂಗಾಧರ ಆಳ್ವ “ ಕನ್ನಡ ನಮ್ಮ ಉಸಿರು, ಕನ್ನಡ ಭಾಷೆ ಕಲಿಯಲು ಸುಲಭ, ಕನ್ನಡ ನಾಡು ಶ್ರೀಗಂಧದ ನಾಡು, ಕನ್ನಡಿಗರು ಕನ್ನಡದ ಬಗ್ಗೆ ಹೆಮ್ಮೆ ಪಡಬೇಕು ” ಎಂದು ತಿಳಿಸಿದರು. ಸಮಾರಂಭದಲ್ಲಿ ಇತ್ತೀಚೆಗೆ ನಿಧನರಾದ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಇವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಯೋಗೀಶ್ ಹಾಗೂ ಶೇಖರ್ ಕನ್ನಡ ಗೀತೆಗಳ ಗಾಯನ ನಡೆಸಿದರು. ಮ್ಯಾನೇಜರ್ ಅಬ್ದುಲ್ ಕಬೀರ್ ಸ್ವಾಗತಿಸಿ, ಮುಖ್ಯೋಪಾಧ್ಯಾಯರಾದ
ಶ್ರೀನಿವಾಸ್ ಕೆದಿಲ ವಂದಿಸಿದರು.