Wednesday, October 25, 2023

ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ :ಬೇಬಿ ಕುಂದರ್

Must read

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ವಲಯ ಕಾಂಗ್ರೆಸ್ ಅಧ್ಯಕ್ಷರು, ಮುಂಚೂಣಿ ಘಟಕದ ಅಧ್ಯಕ್ಷರ ತುರ್ತುಸಭೆಯು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ  ನಡೆಯಿತು. ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಬೇಬಿ ಕುಂದರ್ ಮಾತನಾಡಿ ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಮತ್ತು ವಿಧಾನಸಭಾ ಚುನಾವಣೆಗೆ ಬೂತ್ ಸಮಿತಿಯನ್ನು ಬಲಿಷ್ಟಗೊಳಿಸಿ ಚುನಾವಣೆಗೆ ಸಜ್ಜಾಗುವಂತೆ ಕರೆ ನೀಡಿದರು, ಮತದಾರ ಪಟ್ಟಿಗೆ ಸೇರ್ಪಡೆಗೊಳಿಸುವ ಕಾರ್ಯವನ್ನು ಸಕ್ರಿಯವಾಗಿ ಯಶಸ್ವಿಗೊಳಿಸುವಂತೆ ಒತ್ತಾಯಿಸಿದರು. ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅತೀ ಹೆಚ್ಚು ಸದಸ್ಯರನ್ನು ನೋಂದಯಿಸುವಂತೆ ವಿನಂತಿಸಿದರು.  ಮಂಗಳವಾರ ಬಂಟ್ವಾಳ ಜಕ್ರಿಬೆಟ್ಟು ಜಂಕ್ಷನ್‌ನಲ್ಲಿ ಮಾಜಿ ಸಚಿವ  ಬಿ ರಮಾನಾಥ ರೈಯವರ ನೇತೃತ್ವದಲ್ಲಿ ೪೦೦ ಏಗಿ ವಿದ್ಯುತ್ ಪ್ರಸರಣ ಯೋಜನೆಯನ್ನು ರದ್ದುಗೊಳಿಸುವಂತೆ ನಡೆಯುವ ಪ್ರತಿಭಟನಾ ಧರಣಿಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ವಿನಂತಿಸಿದರು. ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮಶೇಖರ್ ಜೈನ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಜನಾರ್ಧನ ಚೆಂಡ್ತಿಮಾರ್, ವಾಸು ಪೂಜಾರಿ ಲೊರೆಟ್ಟೋ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಜಗದೀಶ್ ಕೊಯಿಲ, ಮಾಣಿಕ್ಯರಾಜ್ ಜೈನ್, ಸುಧಾಕರ್ ಶೆಣೈ, ಪ್ರಧಾನ ಕಾರ್ಯದರ್ಶಿ ಮಹಾಬಲ ಬಂಗೇರಾ, ಕಾರ್ಯದರ್ಶಿಗಳಾದ ದಿನೇಶ್ ಸುಂದರ್ ಶಾಂತಿ, ರಿಚಾರ್ಡ್ ಮೆನೇಜಸ್, ವಸಂತ ಪೂಜಾರಿ ಕಜೆಕಾರು, ಮುಂಚೂಣಿ ಘಟಕದ ಅಧ್ಯಕ್ಷರಾದ ತಿಮ್ಮಪ್ಪ ಪೂಜಾರಿ, ಮಹಮ್ಮದ್ ಶರೀಫ್, ಸದಾನಂದ ಶೆಟ್ಟಿ, ಮನೋಹರ್ ನೇರಂಬೋಳ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಪೂಜಾರಿ ಜೋರಾ, ಮಹಿಳಾ ಬ್ಲಾಕ್ ಅಧ್ಯಕ್ಷರಾದ ಲವೀನಾ ವಿಲ್ಮಾ ಮೋರಸ್, ವಲಯ ಕಾಂಗ್ರೆಸ್ ಅಧ್ಯಕ್ಷರಾದ ದಿನೇಶ್ ಶೆಟ್ಟಿಗಾರ್, ಸೀತರಾಮ್ ಶಾಂತಿ, ಬಾಲಾಜಿ ವಿ ರಾವ್, ಜಯ ಬಂಗೇರಾ, ಆದಂ ಕುಂಞ, ಬಿ ಆರ್ ಅಂಚನ್, ನವೀನ್‌ಚಂದ್ರ ಶೆಟ್ಟಿ, ದೇವಪ್ಪ ಕುಲಾಲ್,ಗಣೇಶ್ ನಾಯಕ್, ವಲೇರಿಯನ್ ಪಿಂಟೋ, ಸದಸ್ಯರಾದ ವೆಂಕಪ್ಪ ಪೂಜಾರಿ, ಎಸ್ ಎ ಹಮೀದ್, ಶಬೀರ್ ಅಹ್ಮದ್ ಉಪಸ್ಥಿತರಿದ್ದರು.

 

More articles

Latest article