Tuesday, April 16, 2024

ಬಂಟ್ವಾಳದಲ್ಲಿ ಶೇ.ನೂರು ಮತದಾನ

ಬಂಟ್ವಾಳ: ಸ್ಥಳೀಯ ಸಂಸ್ಥೆ ಗಳ ಪ್ರತಿನಿಧಿಗಳ ಎರಡು ಸ್ಥಾನಕ್ಕೆ ಇಂದು ಮತದಾನ ನಡೆದಿದ್ದು , ಬಂಟ್ವಾಳ ದಲ್ಲಿ ನೂರು ಶೇ ಮತದಾನ ನಡೆದಿದೆ ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ತಿಳಿಸಿದ್ದಾರೆ.
ತಹಶೀಲ್ದಾರ್ ಅವರ ನೇತ್ರತ್ವದಲ್ಲಿ ತಾಲೂಕಿನಲ್ಲಿ ಇಂದು ನಡೆದ ಮತದಾನ ವ್ಯವಸ್ಥಿತವಾಗಿ ಹಾಗೂ ಶಾಂತಿಯುತ ವಾಗಿ ನಡೆದಿದೆ.
ಬೆಳಿಗ್ಗೆ ಸರಿಯಾಗಿ 8 ಗಂಟೆಯಿಂದ ಸಂಜೆ 4 ವರಗೆ ಮತದಾನ ನಡೆದಿದ್ದು , ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ತಾಲೂಕಿನಲ್ಲಿ ಶೇ. ನೂರು ಮತದಾನ
ದ.ಕ. ಹಾಗೂ ಉಡುಪಿ ಜಿಲ್ಲೆ ಗಳ ಎಲ್ಲಾ ತಾಲೂಕು ಗಳ ಪೈಕಿ ಅತೀ ಹೆಚ್ಚು ಮತದಾರರನ್ನು ಹೊಂದಿರುವ ತಾಲೂಕು ಎಂಬ ಹೆಗ್ಗಳಿಕೆ ಪಡೆದುಕೊಂಡಿರುವ ಬಂಟ್ಚಾಳ ಮತ ಚಲಾವಣೆಯ ಲ್ಲೂ ಭರ್ತಿ ಮಾರ್ಕ್ ಪಡೆದಿದೆ.
ಸ್ಥಳೀಯ ಸಂಸ್ಥೆ ಗಳ ಜನಪ್ರತಿನಿಧಿಗಳು ತಮ್ಮ ಜವಬ್ದಾರಿ ಗೆ ತಕ್ಕಂತೆ ಎಲ್ಲರು ಮತ ಚಲಾಯಿಸುವ ಮೂಲಕ ಜನತೆಗೆ ಉತ್ತಮ ಸಂದೇಶ ನೀಡಿದ್ದಾರೆ.

More from the blog

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...

ಕೆನರಾ ರೊಬೆಕೋ ಸಂಸ್ಥೆಯಿಂದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡುಗೆ

ಬಂಟ್ವಾಳ: ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ 45 ಬೈಸಿಕಲ್ ಗಳನ್ನು ವಿತರಿಸಲಾಯಿತು. ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...