Sunday, October 22, 2023

ಸುಪ್ರೀಂ ಕೋಟ್೯ ನ್ಯಾಯಮೂರ್ತಿಗಳಿಂದ ಪುತ್ತೂರಿನ ವಕೀಲರ ಸಂಘದ ಉದ್ಘಾಟನೆ

Must read

ಮಂಗಳೂರು: ಸುಪ್ರೀಂ ಕೋಟ್೯ ನ ಮಾನ್ಯ ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್ ಅವರು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ಪುತ್ತೂರು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಪುತ್ತೂರಿನ ಆನೆಮಜಲಿನಲ್ಲಿ ನೂತನವಾಗಿ ನಿರ್ಮಿಸಿರುವ ವಕೀಲರ ಸಂಘದ ಕಟ್ಟಡವನ್ನು ಡಿ.28ರ ಮಂಗಳವಾರ ಉದ್ಘಾಟಿಸಿದರು.

  

ಈ ಸಂದರ್ಭದಲ್ಲಿ ಅವರು ಕಟ್ಟಡದ ಆವರಣದಲ್ಲಿ ಸಸಿಯೊಂದನ್ನು ನೆಟ್ಟರು. ಅವರೊಂದಿಗೆ ರಾಜ್ಯ ಹೈಕೋರ್ಟ್‍ನ ನ್ಯಾಯಾಧೀಶರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ನ್ಯಾಯಮೂರ್ತಿ ಕೆ. ಸೋಮಶೇಖರ್, ಹೈಕೋರ್ಟ್‍ನ ನ್ಯಾಯಾಧೀಶರುಗಳಾದ ಮೊಹಮ್ಮದ್ ನವಾಜ್ ಮತ್ತು ಎಸ್. ವಿಶ್ವಜಿತ್ ಶೆಟ್ಟಿ, ಪುತ್ತೂರು ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಹೆಚ್ಚುವರಿ ಅಡ್ವಕೇಟ್ ಜನರಲ್ ಅರುಣ್ ಶ್ಯಾಮ್, ರಾಜ್ಯ ವಕೀಲರ ಪರಿಷತ್ತನ ಅಧ್ಯಕ್ಷರಾದ ಎಲ್. ಶ್ರೀನಿವಾಸ ಬಾಬು ಹಾಗೂ ವಕೀಲರ ಪರಿಷತ್ತ್ ನ ಅಧ್ಯಕ್ಷರಾದ ಪಿ.ಪಿ ಹೆಗ್ಡೆ, ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಮುರಲಿಧರ ಪೈ, ಬಿ. ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

More articles

Latest article