Thursday, October 19, 2023

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಿಳ್ಕೊಡುಗೆ

Must read

ಬಂಟ್ವಾಳ : ಸುಮಾರು 40 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ ಇವರ ಬಿಳ್ಕೊಡುಗೆ ಸಮಾರಂಭವು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಸಮಕ್ಷಮದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ ಇವರ ಸೇವೆಯ ಬಗ್ಗೆ ಪ್ರಶಂಸೆ ಗೈದರು. ಸಹಾಯಕ ನಿರ್ದೇಶಕ ದಿನೇಶ್ ವ್ಯವಸ್ಥಾಪಕರಾದ ಶಾಂಭವಿ ಎಸ್.ರಾವ್ ರವರು ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಸಂಘದ ಅಧ್ಯಕ್ಷರಾದ ವಿಜಯ ಶಂಕರ್ ಆಳ್ವ ಪಿ.ಡಿ.ಒ ಸುನೀಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

More articles

Latest article