ಬಂಟ್ವಾಳ : ಸುಮಾರು 40 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ ಇವರ ಬಿಳ್ಕೊಡುಗೆ ಸಮಾರಂಭವು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಸಮಕ್ಷಮದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ ಇವರ ಸೇವೆಯ ಬಗ್ಗೆ ಪ್ರಶಂಸೆ ಗೈದರು. ಸಹಾಯಕ ನಿರ್ದೇಶಕ ದಿನೇಶ್ ವ್ಯವಸ್ಥಾಪಕರಾದ ಶಾಂಭವಿ ಎಸ್.ರಾವ್ ರವರು ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಸಂಘದ ಅಧ್ಯಕ್ಷರಾದ ವಿಜಯ ಶಂಕರ್ ಆಳ್ವ ಪಿ.ಡಿ.ಒ ಸುನೀಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.