Tuesday, October 24, 2023

ಹರ್ಷ ಕುಟುಂಬಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಂದ ಆರ್ಥಿಕ ನೆರವು

Must read

ಬಂಟ್ವಾಳ: ಮತಾಂದ ಶಕ್ತಿಗಳಿಂದ ಹತ್ಯೆಯಾದ ಶಿವಮೊಗ್ಗ ಜಿಲ್ಲೆಯ ಹಿಂದೂ ಸಂಘಟನೆಯ ಪ್ರಮುಖ ಯುವ ಕಾರ್ಯಕರ್ತ ಹರ್ಷ ನ ಸಾವಿಗೆ ನ್ಯಾಯ ಸಿಗಬೇಕು, ಆತನ ಕೊಲೆ ಮಾಡಿದ ಆರೋಪಿಗಳ ಜೊತೆ, ಅದರ ಹಿಂದಿರುವ ಶಕ್ತಿಗಳ ಪತ್ತೆ ಮಾಡಿ ಕಠಿಣ ಶಿಕ್ಷೆಗೊಳಪಡಿಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರು ಒತ್ತಾಯಿಸಿದ್ದಾರೆ.

*ಲಕ್ಷ ರೂ ನೀಡಿದ ಶಾಸಕ ರಾಜೇಶ್ ನಾಯ್ಕ್*
ಕುಟುಂಬದ ಆಧಾರ ಸ್ತಂಭವಾಗಿ, ಕುಟುಂಬದ ನಿರ್ವಹಣೆ ಜವಬ್ದಾರಿಯನ್ನು ಹೊಂದಿದ್ದ ಹಿಂದೂ ಸಂಘನೆಯ ಪ್ರಮುಖ ಮತಾಂದ ಶಕ್ತಿಗಳ ಕ್ರೂರ ಕೃತ್ಯಕ್ಕೆ ಬಲಿಯಾದ ಹರ್ಷನ ಕುಟುಂಬಕ್ಕೆ ನ್ಯಾಯ ಒದಗಿಸುವ ಜೊತೆಗೆ ಕುಟುಂಬದ ನಿರ್ವಹಣೆ ಜವಬ್ದಾರಿಗೆ ಕಷ್ಟ ವಾಗಬಾರದು ಎಂಬುದು ಹಿಂದೂ ಸಮಾಜದ ಧ್ಯೇಯ ವಾಗಿದೆ , ಈ ನಿಟ್ಟಿನಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ವೈಯಕ್ತಿಕ ನೆಲೆಯಲ್ಲಿ ಅವರ ಬ್ಯಾಂಕ್ ಖಾತೆಯಿಂದ ರೂ ಒಂದು ಲಕ್ಷ ಹಣವನ್ನು ಹರ್ಷ ಅವರ ಕುಟುಂಬದ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿದ್ದಾರೆ.

More articles

Latest article