ವಿಟ್ಲ: ವಿಟ್ಲ ಮುಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ, ಕುಂಡಡ್ಕ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಕಾರ್ಯದರ್ಶಿ, ಪ್ರಗತಿಪರ ಜೇನು ಕೃಷಿಕ, ಬೀಡಿ ಕಾಂಟ್ರಾಕ್ಟರ್ ಉದ್ಯಮಿ,ಕೊಡುಗೈ ದಾನಿ ಕೃಷ್ಣಪ್ಪ ಪೂಜಾರಿ ಬೇರಿಕೆ(53) ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾದರು.
ಮನೆಯಲ್ಲಿ ಇದ್ದಕ್ಕಿದ್ದಂತೆ ಹೃದಯಾಘಾತಕ್ಕೊಳಗಾಗಿದ್ದು, ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿಲಾದರೂ ದಾರಿ ಮಧ್ಯೆಯೇ ಅವರು ಇಹಲೋಕ ತ್ಯಜಿಸಿದರು.
ಮೃತರ ಮನೆಗೆ ಕಾಂಗ್ರೆಸ್ ಪಕ್ಷದ ಮುಖಂಡರು, ನೂರಾರು ಮಂದಿ ಕಾರ್ಯಕರ್ತರು, ಗ್ರಾಮಸ್ಥರು ಭೇಟಿ ನೀಡಿ ಸಂತಾಪ ಸಲ್ಲಿಸಿದರು.