ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರೀ) ವಿಟ್ಲ ಇದರ ಕಾರ್ಯಕ್ಷೇತ್ರ ವ್ಯಾಪ್ತಿಯ ಕಲ್ಲಡ್ಕ ವಲಯದ ಬೋಳಂತೂರು ಒಕ್ಕೂಟದ ನಂದಿನಿ ಸ್ವಸಹಾಯ ಸಂಘದ ಸದಸ್ಯ ಶ್ರೀಮತಿ ಗಿರಿಜಾ ಕೆ ಇವರ ಮಗಳಿಗೆ ಯೋಜನೆಯಿಂದ ಕೊಡಲ್ಪಡುವ ಸುಜ್ಞಾನ ನಿಧಿ ಶಿಷ್ಯ ವೇತನವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬೋಳಂತೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುಷ್ಪ, ಪಂಚಾಯತ್ ಉಪಾಧ್ಯಕ್ಷ ಚಂದ್ರಹಾಸ ರೈ, ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುನ ಶೆಟ್ಟಿ, ಬೋಳಂತೂರು ಒಕ್ಕೂಟ ಅಧ್ಯಕ್ಷ ಸೀತಾ, ಸೇವಾ ಪ್ರತಿನಿಧಿ ಲೀಲಾವತಿ, ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.