ಬಂಟ್ವಾಳ: ಕಾರುಗಳ ನಡುವೆ ಡಿಕ್ಕಿಯಾಗಿ ನಾಲ್ವರು ಗಾಯಗೊಂಡ ಘಟನೆ ಮೆಲ್ಕಾರ್ ಟ್ರಾಫಿಕ್ ಪೋಲಿಸ್ ಠಾಣಾ ವ್ಯಾಪ್ತಿಯ ದಾಸಕೋಡಿ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಬಂಟ್ವಾಳ ನಿವಾಸಿಗಳಾದ ವಿಡಿಯೋಗ್ರಾಫರ್ ಸುಕುಮಾರ್ ಬಂಟ್ವಾಳ, ಪೈಂಟರ್ ವಿಠಲ, ಚಾಲಕ ಪುನೀತ್ ಹಾಗೂ ನಿತೀಶ್ ಗಾಯಗೊಂಡ ವರು.
ಗಾಯಗೊಂಡ ನಾಲ್ವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಾಸಕೋಡಿ ತಿರುವಿನಲ್ಲಿ ಬ್ರೀಝಾ ಕಾರು ಚಾಲಕನ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ ಎಂದು ದೂರಿದ್ದಾರೆ.
ಮಾಣಿ ಕಡೆಯಿಂದ ಬರುತ್ತಿದ್ದ ಓಮ್ನಿ ಕಾರಿಗೆ ಬಂಟ್ವಾಳ ಕಡೆಯಿಂದ ಅತೀ ವೇಗದಿಂದ ಬರುತ್ತಿದ್ದ ಬ್ರೀಝಾ ಕಾರು ದಾಸಕೋಡಿ ತಿರುವಿನಲ್ಲಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ಪರಿಣಾಮ ಓಮ್ನಿ ನಲ್ಲಿದ್ದ ನಾಲ್ವರಿಗೆ ಗಂಭೀರವಾಗಿ ಗಾಯವಾಗಿದೆ. ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಘಟನಾ ಸ್ಥಳಕ್ಕೆ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆ ನಡೆದ ಬಳಿಕ ಕೆಲ ಹೊತ್ತು ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು.