Sunday, April 7, 2024

ಕಾರುಗಳ ನಡುವೆ ಡಿಕ್ಕಿ ಓರ್ವ ಸಾವು ನಾಲ್ವರು ಗಂಭೀರ

ಮಾಣಿ : ಎರಡು ಕಾರುಗಳು ಪರಸ್ಪರ ಡಿಕ್ಕಿಯಾಗಿ ಬೆಂಗಳೂರು ನಿವಾಸಿಯೊಬ್ಬರು ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಭಾನುವಾರ ಮುಂಜಾನೆ ಮಾಣಿ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ಬೆಂಗಳೂರು ಜೆ.ಸಿ.ನಗರದ ಕುರುಬರಹಳ್ಳಿ ನಿವಾಸಿ ಲಕ್ಷ್ಮಣ ಆಚಾರಿ (65) ಮೃತರಾಗಿದ್ದಾರೆ. ಚಾಲಕ ಪ್ರಜ್ವಲ್ (22) ಸಹಿತ ನಾಲ್ವರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಬರುತ್ತಿದ್ದ ಕಾರನ್ನು ಪ್ರಜ್ವಲ್ ಚಲಾಯಿಸಿದ್ದು, ಲಕ್ಷ್ಮಣ ಆಚಾರಿ ಅವರು ಪುತ್ರಿಯ ವಿವಾಹ ಆಮಂತ್ರಣ ನೀಡುವ ನಿಟ್ಟಿನಲ್ಲಿ ಊರಿಗೆ ಆಗಮಿಸುತ್ತಿದ್ದರೆನ್ನಲಾಗಿದೆ.

ಮಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದ ಕಾರಿನವರಿಗೆ ಮಾಣಿ ಜಂಕ್ಷನ್ ನಲ್ಲಿ ರಸ್ತೆ ತಪ್ಪಿ ಬೆಂಗಳೂರು ಮಾರ್ಗದಲ್ಲಿ ಮುಂದುವರಿದ್ದಾರೆ. ಈ ಸಮಯ ಬುಡೋಳಿ ಎಂಬಲ್ಲಿ ಈ ಅಪಘಾತ ನಡೆದಿದೆ. ಪ್ರೆಂಡ್ಸ್ ವಿಟ್ಲ ತಂಡ ವಾಹನವನ್ನು ಸ್ಥಳದಿಂದ ತೆರವು ಮಾಡಿ ಠಾಣೆಗೆ ತಲುಪಿಸಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...