Sunday, October 22, 2023

ಅಖಿಲ ಭಾರತ ಮಟ್ಟದ ಯು.ಪಿ.ಎಸ್.ಸಿ. ಪರೀಕ್ಷೆ: ಅಳಿಕೆ ಹಿರಿಯ ವಿದ್ಯಾರ್ಥಿ ಗಳ ಮಹತ್ಸಾಧನೆ

Must read

 

ವಿಟ್ಲ: ಅಳಿಕೆ ಶ್ರೀ ಸತ್ಯ ಸಾಯಿ ಲೋಕ ಸೇವಾ ವಿದ್ಯಾಸಂಸ್ಥೆಯಲ್ಲಿ ಕಲಿತ ಮೂವರು ವಿದ್ಯಾರ್ಥಿಗಳು 2021ರ ಯು.ಪಿ.ಎಸ್.ಸಿ. ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ.

ಹೊಸದುರ್ಗ ತಾಲೂಕಿನ ನಾಗರಕಟ್ಟೆ ನಿವಾಸಿ ಜಯಣ್ಣ ಹಾಗೂ ಪಂಕಜಾ ದಂಪತಿಗಳ ಪುತ್ರ ಡಾ. ಬೆನಕ ಪ್ರಸಾದ್ 92ನೇ ಸ್ಥಾನ ಪಡೆದಿದ್ದು, 2007ರಿಂದ 2010ರವರೆಗೆ ಪ್ರೌಢ ಶಿಕ್ಷಣವನ್ನು ಅಳಿಕೆಯಲ್ಲಿ ಪೂರೈಸಿದ್ದರು.

 

ದಾವಣಗೆರೆ ನಿವಾಸಿ ಬಸವ ರಾಜ್ ಪಾಟೀಲ್ ಹಾಗೂ ಅನ್ನಪೂರ್ಣ ದಂಪತಿಗಳ ಪುತ್ರ ನಿಖಿಲ್ ಬಿ.ಪಾಟೀಲ್. ಅವರು 139ನೇ ಸ್ಥಾನ ಪಡೆದಿದ್ದು, 2008ರಿಂದ 2013ವರೆಗೆ 8ನೇ ತರಗತಿಯಿಂದ ಪಿಯುಸಿ ವರೆಗೆ ಅಳಿಕೆ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ್ದರು.

 

ಬೀದರ್ ಮೂಲದ ಡಾ. ವಿನಯ ಕುಮಾರ್ ಗಡ್ಗೆ 151ನೇ ಸ್ಥಾನಗಳಿಸಿದ್ದು, 2008ರಿಂದ 2010ರವರೆಗೆ ಪಿಯುಸಿ ಶಿಕ್ಷಣವನ್ನು ಅಳಿಕೆಯಲ್ಲಿ ಪೂರೈಸಿದ್ದಾರೆ.

More articles

Latest article