ಬಂಟ್ವಾಳ: ಕೆಲವೇ ದಿನಗಳ ಅಂತರದಲ್ಲಿ ಜಿಲ್ಲೆಯಲ್ಲಿ ನಡೆದಿರುವ ಮೂವರು ಯುವಕರ ಹತ್ಯೆಯ ಹಿನ್ನೆಲೆಯಲ್ಲಿ ಉಂಟಾಗಿರುವ ಅಹಿತಕರ ಘಟನೆಯಿಂದ ಕಂಗೆಟ್ಟಿರುವ ಜನರಲ್ಲಿ ಧೈರ್ಯ ತುಂಬುವ ನಿಟ್ಟಿನಲ್ಲಿ ಬಂಟ್ವಾಳ ನಗರ ಪೊಲೀಸರು ಬಿ.ಸಿ.ರೋಡಿನಲ್ಲಿ ಪಥಸಂಚಲನ ನಡೆಸಿದರು.
ಬಂಟ್ವಾಳ ನಗರ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಅವಿನಾಶ್ ಹಾಗೂ ಅಪರಾಧ ವಿಭಾಗದ ಸಬ್ ಇನ್ಸ್ ಸ್ಪೆಕ್ಟರ್ ಕಲೈಮಾರ್ ನೇತೃತ್ವದಲ್ಲಿ ಪಥಸಂಚಲನ ನಡೆಯಿತು. ಕೈಕಂಬದಿಂದ ಬಿ.ಸಿ.ರೋಡು ವೃತ್ತದ ವರೆಗೆ ಪಥಸಂಚನ ನಡೆಸಿದರು.
ಜಿಲ್ಲೆಯಲ್ಲಿ ನಡೆದಿರುವ ಅಹಿತಕರ ಘಟನೆಗಳ ಮುನ್ನೆಚ್ಚರಿಕೆಯಾಗಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಅವರು ಸಂಜೆ ೬ರ ಬಳಿಕ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನಲ್ಲಿ ನಿಧಾನಕ್ಕೆ ಅಂಗಡಿಗಳನ್ನು ಮುಚ್ಚಲಾಗುತ್ತಿದೆ. ಆದರೆ ಬಸ್ಸು, ಆಟೋ ಹಾಗೂ ಇತರ ವಾಹನಗಳ ಓಡಾಟ ಎಂದಿನಂತಿದೆ.