Thursday, October 19, 2023

ಬಿಸಿರೋಡು: ಚಂಡಿಕಾಪರಮೇಶ್ವರಿ ದೇವಸ್ಥಾನದ ವತಿಯಿಂದ ಡಾ|ವೀರೇಂದ್ರ ಹೆಗ್ಗಡೆ ಗೆ ಸನ್ಮಾನ

Must read

ಬಿಸಿ ರೋಡಿನ ಚಂಡಿಕಾ ಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮತ್ತು ಜೀರ್ಣೋದ್ಧಾರ ಸಮಿತಿಯ ವತಿಯಿಂದ ಇತ್ತೀಚಿಗೆ ತಾನೇ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡು ನಮ್ಮ ನಾಡಿಗೆ ಹೆಮ್ಮೆಯನ್ನು ತಂದ ಪರಮಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಮಿತಿಯ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಲೋಕನಾಥ್ ಶೆಟ್ಟಿ, ಸದಸ್ಯರಾದ ರಾಜೇಶ್ ಎಲ್ ನಾಯಕ್, ಪ್ರಶಾಂತ್ ಭಟ್, ಕಾರ್ಯದರ್ಶಿ ಇಂದಿರೇಶ್ , ಮಂಜುನಾಥ ಪೈ , ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಶ್ರೀರಾಮಚಂದ್ರ ರಾವ್, ಕೋಶಾಧಿಕಾರಿ ಶ್ರೀ ಸಂಕಪ್ಪ ಶೆಟ್ಟಿ ಇವರು ಉಪಸ್ಥಿತರಿದ್ದರು.

More articles

Latest article