Monday, September 25, 2023
More

    ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಾರುಗಳಿಗೆ ಇನ್ನೊಂದು ಕಾರು ಡಿಕ್ಕಿ, ಕಾರುಗಳು ಜಖಂ

    Must read

    ಬಂಟ್ವಾಳ: ಕಾರು ಚಾಲಕನ ನಿರ್ಲಕ್ಷ್ಯ ತನ ಚಾಲನೆಯಿಂದ ರಸ್ತೆ ಬದಿ ನಿಲ್ಲಿಸಲಾಗಿದ್ದ ಎರಡು ಕಾರುಗಳ ಸಹಿತ ಡಿಕ್ಕಿಯಾದ ಕಾರು ಜಖಂಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಪರಂಗಿಪೇಟೆ ಎಂಬಲ್ಲಿ ಇಂದು ನಡೆದಿದೆ.


    ಆಸೀಫ್ ಮಹಮ್ಮದ್ ಎಂಬಾತನ ನಿರ್ಲಕ್ಷತನದ ಕಾರು ಚಾಲನೆಯಿಂದ ಈ ಘಟನೆ ನಡೆದಿದ್ದು, ಚಾಲಕ ಆಸೀಫ್ ಯಾವುದೇ ಗಾಯವಿಲ್ಲದೆ ಪವಾಡಸದೃಶವಾಗಿ ಪಾರಾಗಿದ್ದಾನೆ.
    ಬಂಟ್ವಾಳ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಫರಂಗಿಪೇಟೆ ಎಂಬಲ್ಲಿ ಈ ಘಟನೆ ನಡೆದಿದೆ.
    ಫರಂಗಿಪೇಟೆ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ.
    ಘಟನೆಯಿಂದ ಮೂರು ಕಾರುಗಳು ಜಖಂಗೊಂಡಿದೆ.
    ಮೆಲ್ಕಾರ್ ಟ್ರಾಫಿಕ್ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    More articles

    LEAVE A REPLY

    Please enter your comment!
    Please enter your name here

    Latest article