ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೇಗದೂತ ಬಸ್ ನಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿಯೊಬ್ಬ ತನಗೆ ಬೇಕಾದ ಸ್ಥಳದಲ್ಲಿ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕಾಗಿ ಕೋಪಗೊಂಡು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೇಗದೂತ ಬಸ್ ಗಾಜಿಗೆ ಕಲ್ಲು ಎಸೆದು ಪುಡಿಗಟ್ಟಿದ ಘಟನೆ ಅಕ್ಟೋಬರ್ 24ರಂದು ಉಪ್ಪಿನಂಗಡಿಯಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕಮದ್ಯದ ಅಮಲಿನಲ್ಲಿದ್ದು, ಬಸ್ ನಿಲ್ಲಿಸಲು ಸೂಚಿಸಿದ್ದಾನೆ. ಬಸ್ ನಿಲ್ಲದೆ ಮುಂದುವರಿದು ಸಾಗಿದ್ದು, ಬಳಿಕ ಕೆಳಗಿಳಿದ ವ್ಯಕ್ತಿ ತಕ್ಷಣ ಬಸ್ನ ಗಾಜಿಗೆ ಕಲ್ಲು ಎಸೆದು ಹಾನಿ ಮಾಡಿದ್ದಾನೆ.