Monday, September 25, 2023
More

    ಉಡುಪಿ, ದ.ಕ ಕಾಸರಗೋಡು ಜಿಲ್ಲೆಗಳ ಕಂಬಳದ ವೇಳಾಪಟ್ಟಿ ಪ್ರಕಟ

    Must read

    ಮಂಗಳೂರು: ಮೂಡುಬಿದಿರೆಯಲ್ಲಿ ಕಂಬಳ ಸಮಿತಿಯ ಅಧ್ಯಕ್ಷ ಎರ್ಮಾಳು ರೋಹಿತ್‌ ಹೆಗ್ಡೆ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಸಭೆ ನಡೆಯಿತು. ಈ ವೇಳೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಈ ಋತುವಿನ ಕಂಬಳದ ಸಂಭಾವ್ಯ ವೇಳಾಪಟ್ಟಿಯನ್ನು ಪ್ರಕಟಿಸಲಾಯಿತು.

    5ರಂದು ಶಿರ್ವ ಕಂಬಳದೊಂದಿಗೆ ಕಂಬಳ ಋತು ಪ್ರಾರಂಭಗೊಳ್ಳಲಿದ್ದು, ಎಪ್ರಿಲ್‌ 8ರ ವರೆಗೆ ಒಟ್ಟು 24 ಕಂಬಳಗಳು ನಡೆಯಲಿವೆ. ಈ ಬಾರಿ ಪಣಪಿಲದಲ್ಲಿ ಹೊಸದಾಗಿ ಕಂಬಳ ಆಯೋಜನೆಗೊಳ್ಳುತ್ತಿದೆ.

    ಕೆಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಮಂಗಳೂರು ಪಿಲಿಕುಳದ ಕಂಬಳಕ್ಕೂ ನ. 12ರಂದು ದಿನಾಂಕ ನೀಡಲಾಗಿದ್ದು, ಜಿಲ್ಲಾಡಳಿತ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗಿದೆ. ಈ ಬಾರಿ ಕಂಬಳ ಆಯೋಜಿಸಲು ಜಿಲ್ಲಾಡಳಿತ ಉತ್ಸುಕತೆ ತೋರ್ಪಡಿಸಿದೆ ಎನ್ನಲಾಗಿದೆ.

    ಇನ್ನು ಕೊರೊನಾ ಸಮಸ್ಯೆಯಿಂದಾಗಿ ಕಳೆದ ಬಾರಿಯ ಕಂಬಳ ಋತು ಡಿ. 5 ರಿಂದ ಆರಂಭಗೊಂಡಿತ್ತು ಮತ್ತು ಒಟ್ಟು 18 ಕಂಬಳಗಳ ದಿನಾಂಕಗಳನ್ನು ಕಂಬಳ ಸಮಿತಿ ಪ್ರಕಟಿಸಿತ್ತು. 5 ಕಂಬಳ ಪೂರ್ಣಗೊಳ್ಳುವಷ್ಟರಲ್ಲಿ ವಾರಾಂತ್ಯ ಕರ್ಫ್ಯೂ, ಕೊರೊನಾ ನಿರ್ಬಂಧ ಜಾರಿಗೊಂಡ ಹಿನ್ನೆಲೆಯಲ್ಲಿ ಉಳಿದ 11 ಕಂಬಳಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಬಳಿಕ ಫೆಬ್ರವರಿಯಲ್ಲಿ ವಾರಾಂತ್ಯ ಕರ್ಫ್ಯೂ ತೆರವುಗೊಂಡ ಬಳಿಕ ಮರು ಆರಂಭಗೊಂಡು ಎಪ್ರಿಲ್‌ನಲ್ಲಿ ಕೊನೆಗೊಂಡಿತ್ತು. ಈ ಬಾರಿ ಹಿಂದಿನಂತೆ ನಿಗದಿತ ಸಮಯಕ್ಕೆ ಆರಂಭಗೊಳ್ಳುತ್ತಿದೆ.

    More articles

    LEAVE A REPLY

    Please enter your comment!
    Please enter your name here

    Latest article