Monday, September 25, 2023
More

    ಮಾವಿನಕಟ್ಟೆ ಶ್ರೀ ಶಾರದೋತ್ಸವ : ಧಾರ್ಮಿಕ ಸಭೆ

    Must read

    ಪುಂಜಾಲಕಟ್ಟೆ: ದುಷ್ಟ ಸಂಹಾರ, ಶಿಷ್ಟರ ರಕ್ಷಣೆಗೆ ಒಂಬತ್ತು ಅವತಾರ ತಾಳಿದ ದುರ್ಗಾಮಾತೆಯ ದಸರಾ ಕಾರ್ಯಕ್ರಮದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದು ಉತ್ತಮ ಬೆಳವಣಿಗೆ. ಉತ್ತಮ ಸಮಾಜ ನಿರ್ಮಾಣದಲ್ಲಿ ಮಾತೆಯರ ಕೊಡುಗೆ ಇದೆ ಎಂದು ದಂತ ವೈದ್ಯ ಡಾ.ಬಾಲಚಂದ್ರ ಶೆಟ್ಟಿ ಅವರು ಹೇಳಿದರು.
    ಅವರು ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆ ಶ್ರೀ ಶಾರದೋತ್ಸವ ಸಮಿತಿ ಮತ್ತು ಶ್ರೀ ಗುರು ಫ್ರೆಂಡ್ಸ್ ವತಿಯಿಂದ ಮಾವಿನಕಟ್ಟೆ ಹಿ.ಪ್ರಾ. ಶಾಲಾವಠಾರದಲ್ಲಿ ನಡೆದ ಶ್ರೀ ಶಾರದಾ ಪೂಜೆಯ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಕಾರ್ಯಕ್ರಮವನ್ನು ಉದ್ಯಮಿ ಸುಂದರ ಪೂಜಾರಿ ಬೋಳಂಗಡಿ ಉದ್ಘಾಟಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿ ಗುತ್ತು ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭ ಹಾರೈಸಿದರು.

    ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದ ಟ್ರಸ್ಟಿ ಶಿವಪ್ಪ ಪೂಜಾರಿ ಹಟದಡ್ಕ ಅವರು ಮಾತನಾಡಿ, ಯುವ ಜನತೆ ಶ್ರಮದಾನದಲ್ಲಿ ತೊಡಗಿಸಿಕೊಳ್ಳುವುದರಿಂದ ದೇವಸ್ಥಾನ ಗಳ ಜೀರ್ಣೋದ್ಧಾರ ಕಾರ್ಯದಲ್ಲಿ ಆರ್ಥಿಕ ಹೊರೆ ಕಡಿಮೆಯಾಗುತ್ತಿದೆ ಎಂದು ಹೇಳಿದರು.

    ಪ್ರಗತಿಪರ ಕೃಷಿಕ ಕುಸುಮಾಕರ ಶೆಟ್ಟಿ ಕೂರಿಯಾಳ, ಮಣಿನಾಲ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗವೇಣಿ, ಉಪಾಧ್ಯಕ್ಷೆ ಗೀತಾ ಸೇಸಪ್ಪ ಪೂಜಾರಿ, ಗ್ರಾ. ಪ. ಸದಸ್ಯರುಗಳಾದ ಸಾಂತಪ್ಪ ಪೂಜಾರಿ ಹಟದಡ್ಕ, ಸರೋಜಿನಿ, ಶಾರದೋತ್ಸವ ಸಮಿತಿ ಗೌರವಾಧ್ಯಕ್ಷ ಸಾಯಿಶಾಂತಿ ಕೋಕಲ, ಶಾರದೋತ್ಸವ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ಕೈಯಾಳ, ಶ್ರೀರಾಮ ಮಂದಿರ ಟ್ರಸ್ಟ್ ಅಧ್ಯಕ್ಷ ಪ್ರಶಾಂತ್ ನಾಯಕ್, ಶ್ರೀ ಗುರು ಫ಼್ರೆಂಡ್ಸ್ ಉಪಾಧ್ಯಕ್ಷ ತಿಲಕ್ ಆಳ್ವ ಉಪಸ್ಥಿತರಿದ್ದರು.

    ಶ್ರೀ ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ನಾಗೇಶ್ ಪೂಜಾರಿ ನೈಬೇಲು ಸ್ವಾಗತಿಸಿದರು. ಸಾಯಿಶಾಂತಿ ಕೋಕಲ ಪ್ರಸ್ತಾವಿಸಿದರು. ಗುರುರಾಜ್ ಕುಂಟೋನಿ ಕಾರ್ಯಕ್ರಮ ನಿರೂಪಿಸಿದರು.

     

    More articles

    LEAVE A REPLY

    Please enter your comment!
    Please enter your name here

    Latest article