Saturday, April 6, 2024

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಸೂರ್ಯ ಗ್ರಹಣದಂದು ದರುಶನಕ್ಕೆ ಅವಕಾಶ : ಯಾವುದೇ ಸೇವೆಗಳು ಇಲ್ಲ

ಸುಬ್ರಹ್ಮಣ್ಯ: ಅ.25ರಂದು ಸೂರ್ಯ ಗ್ರಹಣದ ಹಿನ್ನೆಲೆಯಲ್ಲಿ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ದರುಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಯಾವುದೇ ಸೇವೆಗಳು ನೆರವೇರುವುದಿಲ್ಲ
ಮತ್ತು ಬೋಜನ ಪ್ರಸಾದ ವಿತರಣೆಯೂ ಇರುವುದಿಲ್ಲ. ಭಕ್ತಾಧಿಗಳು ಸಹಕರಿಸಬೇಕು ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.

ದರುಶನಕ್ಕೆ ಅವಕಾಶ:
ಅ.25ರಂದು ಮಂಗಳವಾರ ಬೆಳಗ್ಗೆ 7 ರಿಂದ 8.30ರ ತನಕ 10.30ರಿಂದ ಮದ್ಯಹ್ನ 1ರ ತನಕ ಹಾಗೂ ಗ್ರಹಣದ ಸಮಯವಾದ 5.11ರಿಂದ 6.28ರ ತನಕ ಶ್ರೀ ದೇವರ ದರುಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಂತರ ದರುಶನಕ್ಕೆ ಅವಕಾಶ ಇರುವುದಿಲ್ಲ‌.

ಅ.26ರಂದು 9ಗಂಟೆಯಿಂದ ದರುಶನ:
ಅ.26ರಂದು ಮುಂಜಾನೆ ಶ್ರೀ ದೇವಳದಲ್ಲಿ ಶುದ್ದಿ ಕಾರ್ಯದ ಬಳಿಕ ಶ್ರೀ ದೇವರಿಗೆ ಮುಂಜಾನೆ ನಡೆಯುವ ನಿತ್ಯದ ಪೂಜಾ ವಿದಿವಿಧಾನಗಳು ನೆರವೇರಿದ ನಂತರ ಸುಮಾರು ಬೆಳಗ್ಗೆ 9 ಗಂಟೆಯ ನಂತರ ಶ್ರೀ ದೇವರ ದರುಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಆ ಬಳಿಕ ಸೇವಾಧಿಗಳು ಆರಂಭಗೊಳ್ಳಲಿದೆ. ಭಕ್ತರು ಸಹಕರಿಸಬೇಕು ಎಂದು ತಿಳಿಸಿದೆ.

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...