ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ, ಬಂಟ್ವಾಳ, ವಕೀಲರ ಸಂಘ (ರಿ) ಬಂಟ್ವಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ, ಕಂದಾಯ ಇಲಾಖೆ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಕಾನೂನು ಮಾಹಿತಿ ಶಿಬಿರ ಬಿಸಿರೋಡಿನ ಸ್ತ್ರೀ ಶಕ್ತಿ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಧೀಶೆ ಮತ್ತು ಜೆ.ಎಮ್.ಎಫ್.ಸಿ.ಬಂಟ್ವಾಳ , ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷೆ ಭಾಗ್ಯಮ್ಮ ಅವರು, ಸಮಾಜದ ಅಭ್ಯುದಯಕ್ಕೆ ಹಿರಿಯರು ಆಲದ ಮರವಿದ್ದಂತೆ, ತಂದೆ ತಾಯಿಯನ್ನು ಗೌರವಿಸುವ ಕೆಲಸ ಯುವ ಸಮುದಾಯದಿಂದ ಆಗಬೇಕಾಗಿದೆ. ಹಿರಿಯರನ್ನು ಕಡೆಗಣಿಸುವ ಪ್ರವೃತ್ತಿಯನ್ನು ಯುವ ಸಮುದಾಯ ದೂರ ಮಾಡಬೇಕು ಎಂದು ಅವರು ಎಂದ ಅವರು ತಂದೆ ತಾಯಿಗಳನ್ನು ಮಕ್ಕಳು ಸರಿಯಾಗಿ ನೋಡಿಕೊಳ್ಳದಿದ್ದರೆ, ಅವರು ಪೋಲಿಸ್ ಕಮೀಶನರ್ ಅವರಿಗೆ ದೂರು ನೀಡಿದರೆ ಅಂತವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಅವಕಾಶವಿದೆ ಎಂದು ಅವರು ತಿಳಿಸಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಜೆ.ಎಮ್.ಎಫ್.ಸಿ.ಬಂಟ್ವಾಳ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ್ ವೈ ತಳವಾರ ಅವರು ಮಾತನಾಡಿ, ತಾಂತ್ರಿಕ ಯುಗದಲ್ಲಿ ಸಂಸ್ಕಾರಗಳು ಮಾಯವಾಗುತ್ತ ಬರುತ್ತಿರುವುದು ವಿಷಾಧನೀಯ ವಿಚಾರ ಎಂದು ಬೇಸರ ವ್ಯಕ್ತಪಡಿಸಿದರು.
ಬಂಟ್ವಾಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿಕಂಬಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿ ನ್ಯಾಯವಾದಿ ಮಹಮ್ಮದ್ ಗಝಾಲಿ ಹಿರಿಯ ನಾಗರಿಕರಿಗೆ ಸರಕಾರಿ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಬಿ.ಗಣೇಶಾನಂದ ಸೋಮಯಾಜಿ, ಬಂಟ್ವಾಳ ತಹಶಿಲ್ದಾರ್ ಸ್ಮಿತಾರಾಮು, ಸಹಾಯಕ ಸರ್ಕಾರಿ ಅಭಿಯೋಜಕಿ ಹರಿಣಿ ಕುಮಾರಿ ಡಿ. ಉಪಸ್ಥಿತರಿದ್ದರು.
ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾವತಿ ಸ್ವಾಗತಿಸಿ, ಹಿರಿಯ ಮೇಲ್ವಿಚಾರಕಿ ಶಾಲಿನಿ ವಂದಿಸಿದರು. ಮೇಲ್ವಿಚಾರಕಿ ಲೀಲಾವತಿ ಕಾರ್ಯಕ್ರಮ ನಿರೂಪಿಸಿದರು.