ಬಂಟ್ವಾಳ: ಬರಿಮಾರು ಗ್ರಾಮದ ಶ್ರೀ ಕಲ್ಲೆಟ್ಟಿ ಕಾನಲ್ತಾಯ ಮಹಾಕಾಳಿ ದೇವಸ್ಥಾನದ ಬಳಿ 40 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ತಡೆಗೋಡೆ ಕಾಮಗಾರಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ, ಬರಿಮಾರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ, ಉಪಾಧ್ಯಕ್ಷ ಸದಾಶಿವ ಬರಿಮಾರು, ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಗದೀಶ್ ಪೂಜಾರಿ, ಪ್ರಮುಖರಾದ ನವೀತ್ ಶೆಟ್ಟಿ, ಅಮಿತ್ಕುಮಾರ್ ಜೈನ್, ಗ್ರಾ.ಪಂ.ಸದಸ್ಯರಾದ ಪುಷ್ಪಲತಾ, ವನಿತಾ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸತೀಶ್ ಪ್ರಭು, ವಿಶ್ವನಾಥ್, ಸದಾನಂದ, ಅಶ್ವಥ್ ಬರಿಮಾರು, ಸುಷ್ಮಾ ಪ್ರಭಾಕರ್, ಜಯಂತ ಪೂಜಾರಿ ಮೊದಲಾದವರಿದ್ದರು.