ಬಂಟ್ವಾಳ: ನೇರಳಕಟ್ಟೆ ಸಮೀಪದ ಪರ್ಲೊಟ್ಟು ಅಬೂಬಕ್ಕರ್ ಸಿದ್ದೀಕ್ ಜುಮಾ ಮಸೀದಿಯ ನೂತನ ಅಧ್ಯಕ್ಷರಾಗಿ ದರ್ಬಾರ್ ಅಬ್ದುಲ್ ಖಾದರ್ ಪುನರಾಯ್ಕೆಗೊಂಡರು.

ಮಸೀದಿ ಗೌರವಾಧ್ಯಕ್ಷ ಹಾಜಿ ಪಿ.ಕೆ.ಆದಂ ದಾರಿಮಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಮಸೀದಿಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಈ ಸಂದರ್ಭದಲ್ಲಿ ಸ್ಥಳೀಯ ಖತೀಬ್ ಸೈದಾಲಿ ಮುಸ್ಲಿಯಾರ್ ಉಪಸ್ಥಿತರಿದ್ದರು.

ಉಪಾಧ್ಯಕ್ಷರಾಗಿ ಅಬ್ದುಲ್ ರಶೀದ್ ಪರ್ಲೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಟಿ. ಸಿದ್ದೀಕ್, ಜೊತೆ ಕಾರ್ಯದರ್ಶಿ ಯಾಗಿ ಶರೀಫ್ ಪರ್ಲೊಟ್ಟು, ಕೋಶಾಧಿಕಾರಿಯಾಗಿ ಕೆ.ಬಿ. ಖಾಸಿಂ ಹಾಜಿ ಮಿತ್ತೂರು ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಸ್.ಎಂ. ಮುಹಮ್ಮದ್ ರಫೀಕ್ ಹಾಜಿ ನೇರಳಕಟ್ಟೆ, ಪಿ.ಕೆ.ಅಬ್ಬಾಸ್ ಪರ್ಲೊಟ್ಟು, ಸಾಹುಲ್ ಹಮೀದ್(ಅಮ್ಮಿ) ಪರ್ಲೊಟ್ಟು, , ಕೆ.ಬಿ. ಇಸ್ಮಾಯಿಲ್ ಪರ್ಲೊಟ್ಟು, ಹೈದರ್ ಬೋಳಿಯಾರು, ಸಮದ್ ಪರ್ಲೊಟ್ಟು, ಪಿ.ಕೆ.ಝುಬೈರ್ ಪರ್ಲೊಟ್ಟು, ಇಸಾಕ್ ಕೌಸರಿ , ಜುನೈದ್, ಆರಿಫ್ ಹಾಗೂ ಅಬ್ದುಲ್ ಲತೀಫ್ ನೇರಳಕಟ್ಟೆ ಇವರನ್ನು ನೇಮಿಸಲಾಯಿತು.

ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಬಿ.ಟಿ. ವಾರ್ಷಿಕ ವರದಿ ವಾಚಿಸಿ, ಲೆಕ್ಕ ಪತ್ರ ಮಂಡಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here