Sunday, April 7, 2024

ಕಬಡ್ಡಿ ಪ್ರಿಯರಿಗೆ ಗುಡ್‌ ನ್ಯೂಸ್….! ಪ್ರೊ ಕಬಡ್ಡಿ ಲೀಗ್​ಗೆ ಡೇಟ್ ಫಿಕ್ಸ್

ಹೊಸದಿಲ್ಲಿ: ಕಬಡ್ಡಿ ಪ್ರೀಯರಿಗೆ ಇಂದು ಗುಡ್‌ ನ್ಯೂಸ್ ಸಿಕ್ಕಿದ್ದು, ಪ್ರೋ ಕಬಡ್ಡಿ ಲೀಗ್‌ ಇದೇ ಡಿಸೆಂಬರ್‌ 2ರಿಂದ ಆರಂಭವಾಗಲಿದೆ ಎಂದು ಮಶಾಲ್‌ ಸ್ಫೋ ರ್ಟ್ಸ್ ನ ಮುಖ್ಯಸ್ಥ ಮತ್ತು ಪಿಕೆಎಲ್‌ನ ಲೀಗ್‌ ಕಮಿಷನರ್‌ ಆಗಿರುವ ಅನುಪಮ್‌ ಗೋಸ್ವಾಮಿ ತಿಳಿಸಿದರು.

ಮುಂಬಯಿಯಲ್ಲಿ ಸೆ. 8 ಮತ್ತು 9ರಂದು ಪ್ರೊ ಕಬಡ್ಡಿ ಹರಾಜು ನಡೆಯಲಿದೆ. ಸುಮಾರು 500 ಆಟಗಾರರ ಹೆಸರು ಇದರಲ್ಲಿ ಗೋಚರಿಸುವ ಸಾಧ್ಯತೆ ಇದೆ. ಪ್ರತೀ ಫ್ರಾಂಚೈಸಿಗಳಿಗೆ 7 ಆಟಗಾರರನ್ನು ಉಳಿಸಿಕೊಳ್ಳುವ ಅವಕಾಶ ನೀಡಲಾಗಿತ್ತು. ಇದರಿಂದ 84 ಆಟಗಾರರು ರಿಟೈನ್‌ ಆಗಲಿದ್ದಾರೆ. ಇದರ ಯಾದಿ ಕೂಡ ಪ್ರಕಟಗೊಂಡಿದೆ. ಬೆಂಗಳೂರು ಬುಲ್ಸ್‌ ಉಳಿಸಿಕೊಂಡಿರುವ ಆಟಗಾರರೆಂದರೆ ನೀರಜ್‌ ನರ್ವಾಲ್‌, ಸೌರಭ್‌ ನಂದಲ್‌, ಯಶ್‌ ಹೂಡಾ, ಭರತ್‌ ಮತ್ತು ಅಮಾನ್‌.

ಈ ಬಾರಿಯ ಹರಾಜಿನಲ್ಲಿ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್‌ -2023ರ ಫೈನಲಿಸ್ಟ್‌ ತಂಡಗಳ 24 ಆಟಗಾರರಿಗೆ ಅವಕಾಶ ನೀಡಲಾಗು ವುದು. ಹೀಗಾಗಿ ಹೊಸಮುಖಗಳ ದರ್ಶನವಾಗುವ ಸಾಧ್ಯತೆ ಹೆಚ್ಚಿದೆ.

ತಂಡಗಳ ವಿವರ: ಬೆಂಗಾಲ್ ವಾರಿಯರ್ಸ್, ಬೆಂಗಳೂರು ಬುಲ್ಸ್, ದಬಾಂಗ್ ಡೆಲ್ಲಿ, ಗುಜರಾತ್ ಜೈಂಟ್ಸ್, ಹರಿಯಾಣ ಸ್ಟೀಲರ್ಸ್, ಜೈಪುರ ಪಿಂಕ್ ಪ್ಯಾಂಥರ್ಸ್, ಪಾಟ್ನಾ ಪೈರೇಟ್ಸ್, ಪುಣೇರಿ ಪಲ್ಟನ್, ತಮಿಳ್ ತಲೈವಾಸ್, ತೆಲುಗು ಟೈಟಾನ್ಸ್, ಯು ಮುಂಬಾ ಮತ್ತು ಯುಪಿ ಯೋಧಾಸ್.

 

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...