Monday, April 8, 2024

ಫ್ಯಾನ್ಸ್​​ಗೆ ಬಿಗ್​ ಶಾಕ್ ​​: ಭಾರತ-ಪಾಕಿಸ್ತಾನ್ ಪಂದ್ಯಕ್ಕೆ ಮಳೆ ಅಡ್ಡಿ

ಶ್ರೀಲಂಕಾದ ಪಲ್ಲೆಕೆಲೆ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರೋ ಏಷ್ಯಾಕಪ್​​ ಮಹತ್ವದ ಪಂದ್ಯದಲ್ಲಿ ಟೀಂ ಇಂಡಿಯಾ, ಪಾಕ್​​ ತಂಡಗಳು ಮುಖಾಮುಖಿ ಆಗಿವೆ.

ಟಾಸ್​ ಗೆದ್ದ ಕ್ಯಾಪ್ಟನ್​ ರೋಹಿತ್​ ಶರ್ಮಾ ಮೊದಲು ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಪಾಕ್​​ ತಂಡವು ಫೀಲ್ಡಿಂಗ್​​ ಮಾಡುತ್ತಿದೆ.

ಟೀಂ ಇಂಡಿಯಾದ ಪರ ಕ್ಯಾಪ್ಟನ್​ ರೋಹಿತ್​​ ಶರ್ಮಾ, ಯಂಗ್​​ ಅಂಡ್​​ ಎನರ್ಜಿಟಿಕ್​​​​ ಆಟಗಾರ ಶುಭ್ಮನ್​​ ಗಿಲ್​​​ ಓಪನಿಂಗ್​ ಮಾಡಿದರು. ಶಾಹೀನ್​ ಅಫ್ರಿದಿ 5ನೇ ಓವರ್​​ನಲ್ಲಿ ದಿಢೀರ್​ ಎಂದು ಮಳೆ ಬಂದು ನಡೆಯುತ್ತಿದ್ದ ಪಂದ್ಯಕ್ಕೆ ಅಡ್ಡಿಪಡಿಸಿದೆ. ಮಳೆ ಹೆಚ್ಚಾಗುತ್ತಿದ್ದಂತೆ ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ.

ಸದ್ಯ ಪಿಚ್​ನಲ್ಲಿ ಕವರ್ ಹೊದಿಸಲಾಗಿದ್ದು, ಆಟಗಾರರು ಡ್ರೆಸ್ಸಿಂಗ್ ರೂಮ್​ನತ್ತ ಮರಳಿದ್ದಾರೆ. ಇನ್ನು ಮಳೆ ನಿಂತ ಬಳಿಕ ಪಂದ್ಯ ಮುಂದುವರೆಯಬಹುದು.

More from the blog

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...

ಬಂಟ್ವಾಳದ ಕುದ್ಕೋಳಿ: ಹೊತ್ತಿ ಉರಿದ ಡಸ್ಟರ್ ಕಾರು

ಬಂಟ್ವಾಳ: ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ಬೆಳಗ್ಗೆ (ಸೋಮವಾರ) ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಬಳಿಕ ಸ್ಥಳೀಯರು ಹಾಗೂ ಬಂಟ್ವಾಳ...