Wednesday, April 17, 2024

ಬಸ್ಸಿನಲ್ಲಿ ಅನುಚಿತ ವರ್ತನೆ : ಯುವಕ ಪೊಲೀಸ್‌ ವಶಕ್ಕೆ

ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಯುವಕನೋರ್ವ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಮಹಿಳೆಯೋರ್ವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಟ್ವೀಟರ್ ಖಾತೆಗೆ ಟ್ವೀಟ್ ಮೂಲಕ ದೂರಿದ್ದು, ಇದಕ್ಕೆ ಸ್ಪಂದಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಹಿಳೆ ಪುತ್ತೂರಿನಿಂದ ನಿಂತಿಕಲ್ಲಿಗೆ ಬಸ್ಸಲ್ಲಿ ಸಂಜೆ ಬರುತ್ತಿರುವಾಗ ಯುವಕನೋರ್ವ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದು, ಆ ಯುವಕ ಫೋನ್ ನಂಬರನ್ನು ಮಹಿಳೆಗೆ ನೀಡಿದ್ದು ಬಳಿಕ ಸವಣೂರಲ್ಲಿ ಬಸ್ಸಿನಿಂದ ಇಳಿದು ಹೋಗಿದ್ದರು. ಈ ಬಗ್ಗೆ ಟ್ವೀಟ್ ಮೂಲಕ ದೂರು ನೀಡಿದ್ದರು.

ಈ ಬಗ್ಗೆ ಮಹಿಳೆಯಿಂದ ದೂರನ್ನು ಸ್ವೀಕರಿಸಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಟ್ವಿಟರ್ ಖಾತೆಯಿಂದ ಪ್ರತಿಕ್ರಿಯಿಸಿದ್ದಾರೆ

More from the blog

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85...

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಲೋಕಸಭಾ ಚುನಾವಣೆ : ಮತಯಂತ್ರಗಳ ಕಮಿಷನಿಂಗ್‌ ಕಾರ್ಯ…. ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಬಂಟ್ವಾಳ :ಮೊಡಂಕಾಪಿನಲ್ಲಿರುವ ಇನ್ಫೆಂಟ್‌ ಜೀಸಸ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ದಿನ ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205 ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಳಸಲಾಗುವ ಮತಯಂತ್ರಗಳ ಕಮಿಷನಿಂಗ್‌ ಕಾರ್ಯವು ನಡೆಯಿತು. ಈ ಸಂದರ್ಭದಲ್ಲಿ...