Wednesday, April 17, 2024

ಬಂಟ್ವಾಳ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟ

ವಿಟ್ಲ: ವಿಟ್ಲ ಪದವಿಪೂರ್ವ ಶಿಕ್ಷಣ ಇಲಾಖೆ, ದ.ಕ. ಜಿಲ್ಲೆ ಮಂಗಳೂರು ಹಾಗೂ ವಿಠಲ ಪದವಿಪೂರ್ವ ಕಾಲೇಜು ಇದರ ಸಹಭಾಗಿತ್ವದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ವಿಠಲ ಪದವಿಪೂರ್ವ ಕಾಲೇಜಿನ ಒಳಾಂಗಣ ಮೈದಾನದಲ್ಲಿ ನಡೆಯಿತು.

ಈ ಪಂದ್ಯಾಟದ ಉದ್ಘಾಟನೆಯನ್ನು ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಂಯೋಜಕ ನಿತಿನ್ ಕೋಡಿಯ ಮಾಡಿದರು. ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ಅಧ್ಯಕ್ಷತೆ ವಹಿಸಿದ್ದರು. ವಿಟ್ಠಲ ಎಜುಕೇಶನ್ ಸೊಸೈಟಿಯ ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯರಗಳಾದ ನಿತ್ಯಾನಂದ ನಾಯಕ್ ಮತ್ತು ಸದಾಶಿವ ಬನ ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ ಗೌಡ ಸ್ವಾಗತಿಸಿದರು. ಉಪನ್ಯಾಸಕಿ ಜ್ಯೋತಿ ಎಂ ವಂದಿಸಿ ನಿರೂಪಣೆ ಮಾಡಿದರು.

More from the blog

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...