Saturday, April 6, 2024

ಅಳಿಕೆ: ನೂತನ ವಿದ್ಯಾರ್ಥಿನಿಯರ ಪದವಿಪೂರ್ವ ಕಾಲೇಜಿಗೆ ಭೂಮಿ ಪೂಜೆ

ಅಳಿಕೆ: ನೂತನ ವಿದ್ಯಾರ್ಥಿನಿಯರ ಪದವಿಪೂರ್ವ ಕಾಲೇಜಿಗೆ ಭೂಮಿ ಪೂಜೆ

ವಿಟ್ಲ: ಅಳಿಕೆ ಶ್ರೀ ಸತ್ಯ ಸಾಯಿ ಲೋಕ ಸೇವಾ ಟ್ರಸ್ಟ್ ನ ಆಶ್ರಯದಲ್ಲಿ, ವಿದ್ಯಾಸಂಸ್ಥೆಗಳ ಮುಖ್ಯ ದ್ವಾರದ ಬಳಿ ಸಂಸ್ಥೆಗಳ ಮ್ಯಾನೇಂಜಿಗ್ ಟ್ರಸ್ಟಿ ಕೆ.ಎಸ್ ಕೃಷ್ಣ ಭಟ್ ನೇತೃತ್ವದಲ್ಲಿ ಪ್ರೌಢಶಾಲಾ ವಿಭಾಗದ ನಿವೃತ್ತ ಮುಖ್ಯೋಪಾಧ್ಯಾಯನಿ ಕೆ.ವಿ ವೆಂಕಟಲಕ್ಷ್ಮಿ ಅಮ್ಮನವರ ದಿವ್ಯ ಹಸ್ತದಿಂದ ನೂತನ ವಿದ್ಯಾರ್ಥಿನಿಯರ ಪದವಿಪೂರ್ವ ಕಾಲೇಜಿಗೆ ಭೂಮಿ ಪೂಜೆ ಹಾಗೂ ಶಂಕು ಸ್ಥಾಪನೆ ಕಾರ್ಯಕ್ರಮ ನಡೆಯಿತು.

ಸಂಸ್ಥೆಗಳ ಕಾರ್ಯದರ್ಶಿ ಮತ್ತು ಸಂಚಾಲಕರಾದ ಎಸ್ ಚಂದ್ರಶೇಖರ ಭಟ್, ಆಡಳಿತಾಧಿಕಾರಿ ಎಸ್ ಜನಾರ್ದನ ನಾಯಕ್, ಆಡಳಿತ ಮಂಡಳಿ ಸದಸ್ಯ ಡಾ. ವಿಕ್ರಮ್ ಶೆಟ್ಟಿ, ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು, ಪಂಚಾಯತ್ ಸದಸ್ಯರು, ಅಳಿಕೆ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಕಾನ ಈಶ್ವರ ಭಟ್, ಅಳಿಕೆ ಸೊಸೈಟಿಯ ನಿರ್ದೇಶಕರುಗಳಾದ ರೂಪೇಶ್‌ ರೈ, ಅಳಿಕೆಗುತ್ತು, ಮಹೇಶ್‌ ಅಳಿಕೆ, ಅಳಿಕೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಚಿನ್ನಪ್ಪ ಗೌಡ, ಯೋಗ ಶಿಕ್ಷಕರಾದ ಕೆ. ಆನಂದ ಶೆಟ್ಟಿ, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸದಸ್ಯರು, ಹಿರಿಯ ವಿದ್ಯಾರ್ಥಿ ಮುಖಂಡರಾದ ಡಾ.ಸುರೇಶ್, ಡಾ.ಶ್ರೀಪಾದ ಮೆಹಂದಲೆ, ಡಾ.ನರೇಶ್ ರೈ, ಕಟ್ಟಡದ ಮುಖ್ಯ ಇಂಜನಿಯರ್ ಅರ್ಜುನ್ ಕೆ.ಪೂಂಜಾ, ಊರಿನ ಮಹನೀಯರು, ಮಾತೆಯರು, ಹಿರಿಯ ವಿದ್ಯಾರ್ಥಿಗಳು, ಸಂಸ್ಥೆಯ ಎಲ್ಲಾ ವಿಭಾಗಗಳ ಮುಖ್ಯಸ್ಥರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವೇದಮೂರ್ತಿ ಉದಯಶಂಕರ ಭಟ್ ವೈದಿಕ ಕಾರ್ಯಕ್ರಮ ನೆರವೇರಿಸಿದರು.

More from the blog

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ವಿಟ್ಲ : ಮಹಿಳೆ ಆತ್ಮಹತ್ಯೆ

ವಿಟ್ಲ: ವಿಟ್ಲಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡು ನಿವಾಸಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿ.ರಾಮಣ್ಣ ನಾಯ್ಕ ಅವರ ಪತ್ನಿ ಸುಶೀಲಾ ಅವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನೀರಿಗಾಗಿ ಪ್ರತಿಭಟನೆ 

ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೩ನೇ ವಾರ್ಡ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯಿತಿ ಯಾವುದೇ ಸ್ಪಂದನೆ ನೀಡುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಕೊಡ, ಬಕೆಟ್ ಹಿಡಿದು...