Friday, April 5, 2024

ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಬಂಟ್ವಾಳ: ಬೈಕ್ ಸವಾರನೋರ್ವ ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾ.12 ರಂದು ಮಂಗಳವಾರ ಮುಂಜಾವಿನ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ
ಮಾರಿಪಳ್ಳದಲ್ಲಿ ನಡೆದಿದೆ.


ಅಮ್ಟಾಡಿ ನಿವಾಸಿ ಅಕ್ಷಿತ್ (25) ಮೃತಪಟ್ಟ ಅವಿವಾಹಿತ ಯುವಕ.
ಅಕ್ಷಿತ್ ಅವರು ಮಂಗಳೂರು ಖಾಸಗಿ ಕಂಪೆನಿಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ಸುಮಾರು ‌4 ಗಂಟೆಗೆ ಹೊರಟಿದ್ದ.
ಅಂದಾಜು 4.30 ಗಂಟೆಗೆ ಮಾರಿಪಳ್ಳ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಮಂಗಳೂರು ‌ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆದಾಗಲೇ ಆತ ಮೃತಪಟ್ಟಿದ್ದಾನೆ.
ಮುಂಜಾವಿನ ವೇಳೆ ನಿದ್ದೆ ಯ ಮಂಪರಿನಲ್ಲಿ ಅಥವಾ ಇನ್ನಾವುದೇ ಕಾರಣದಿಂದ ಅಪಘಾತ ಸಂಭವಿಸಿದೆ ಎಂಬುದು ಇನ್ನು ತನಿಖೆಯ ವೇಳೆ ತಿಳಿಯಬೇಕಾಗಿದೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...