Saturday, April 20, 2024

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯ ಪ್ರಚಾರ ಉಸ್ತುವಾರಿ,ಮಾಜಿ ಸಚಿವರಾದ ಬಿ.ರಮಾನಾಥ ರೈ ಯವರು ಜೊತೆಗಿದರು ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ತಾಲೂಕು ತಾಲೂಕು ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ಹಾಗೂ ಪದ್ಮಶೇಖರ್ ಜೈನ್,ಅಶ್ವಿನ್ ಕುಮಾರ್ ರೈ,ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಅಬ್ಬಾಸ್ ಅಲಿ,ವಿನಾಯರಾಜ್,ಶುಭಾಶ್ಚಂದ್ರ ಶೆಟ್ಟಿ ಕೊಳ್ನಾಡು,ಮಾಜಿ ಎಪಿಎಂಸಿ ಅಧ್ಯಕ್ಷರಾದ ಪದ್ಮನಾಭ ರೈ,ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲವೀನಾ ವಿಲ್ಮಾ ಮೋರಸ್ ಹಾಗೂ ಜಯಂತಿ ವಿ ಪೂಜಾರಿ,ಪಾಣೆಮಂಗಳೂರು ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲು, ಸಂಜೀವ ಪೂಜಾರಿ ಬಿರ್ವ,ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಲ್ಲಿಕಾ ವಿ ಶೆಟ್ಟಿ, ಮಾಯಿಲಪ್ಪ ಸಾಲ್ಯಾನ್, ಸುದರ್ಶನ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.

More from the blog

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ದಿನಾಂಕ 19-04-2024 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು. ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ...

ಏ.21ರಂದು ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ

ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಎ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ...

ನೇತ್ರಾವತಿ ನದಿ ತೀರದ ಕೃಷಿಕರ ಪಂಪ್ ಸೆಟ್ ಗಳ ವಿದ್ಯುತ್ ಸ್ಥಗಿತ : ರೈತರಿಂದ ಪ್ರತಿಭಟನೆ

ಬಂಟ್ವಾಳ: ದ.ಕ.ಜಿಲ್ಲಾಡಳಿತವೂ ಮಂಗಳೂರು ನಗರಕ್ಕೆ ಕುಡಿಯುವ ನೀರು ಕೊರತೆಯಾಗುತ್ತಿದೆ ಎಂದು ನೇತ್ರಾವತಿ ನದಿ ಪಾತ್ರದ ಕೃಷಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತ ಮಾಡಿರುವ ವಿರುದ್ಧ ರೈತರು ಬಂಟ್ವಾಳ ತಾಲೂಕು ಆಡಳಿತ ಸೌಧದ...