Sunday, April 21, 2024

ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

ಬಂಟ್ವಾಳ: ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಇಂದು ಆದಿತ್ಯವಾರ ಬಂಟ್ವಾಳ ತಾಲೂಕು ಆಚರಣಾ ಸಮಿತಿಯ ವತಿಯಿಂದ ಮಹಾವೀರ ಜಯಂತಿ ಆಚರಿಸಲಾಯಿತು.

ತಹಶೀಲ್ದಾರ್ ಅರ್ಚನಾ ಭಟ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಅವರು ಮಹಾವೀರ ಜಯಂತಿಯ ಶುಭಾಶಯ ಸಂದೇಶವನ್ನು ನೀಡಿದರು. ಈ ಸಂದರ್ಭದಲ್ಲಿ ಬಂಟ್ವಾಳ ಜೈನ್ ಸಮಾಜದ ಪ್ರಮುಖರಾದ ಪಿ. ಜಿನರಾಜ, ಸುದರ್ಶನ್ ಜೈನ್ ಪಂಜಿಕಲ್ಲು, ಸನ್ಮತಿ ಜಯಕೀರ್ತಿ, ಅಜಿತ್ ಕುಮಾರ್ ಜೈನ್, ಧನಂಜಯ ಜೈನ್, ಸಂತೋಷ್ ಕುಮಾರ್ ಜೈನ್ ಮುಂತಾದವರು ಉಪಸ್ಥಿತರಿದ್ದರು.

ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಆಡಳಿತ ಅಧಿಕಾರಿಗಳು ಗ್ರಾಮ ಸಹಾಯಕರು ಹಾಜರಿದ್ದರು.

More from the blog

ಪಾದಚಾರಿಗೆ ಬೈಕ್ ಡಿಕ್ಕಿ : ವ್ಯಕ್ತಿ ಸಾವು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮಂಗಳೂರು - ಬೆಂಗಳೂರು ಮಧ್ಯೆ ತುಂಬೆ ಎಂಬಲ್ಲಿ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ...

ಕಾಡಿನಲ್ಲಿ ಕೊಳೆತ ತಲೆಬುರುಡೆ, ಚೀಲ ಪತ್ತೆ

ಸುಳ್ಯ: ಕಾಡಿನಲ್ಲಿ ಕೊಳೆತ ತಲೆಬುರುಡೆ ಹಾಗೂ ಚೀಲ ಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ಚಂದ್ರಶೇಖರ್ ಎಂಬುವರು ದೂರು ದಾಖಲಿಸಿದ್ದಾರೆ. ಚಂದ್ರಶೇಖರ್ ಅವರು ಸ್ಥಳೀಯರೊಂದಿಗೆ ಏ. 19 ರಂದು ಕಾಡಿನಿಂದ...

ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಎಸ್.ಎಂ. ಮುಹಮ್ಮದ್ ಅಲಿ ಯವರಿಗೆ ಅಭಿನಂದನೆ

ಬಂಟ್ವಾಳ : ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ಪೂರ್ವಾದ್ಯಕ್ಷ ಎಸ್.ಎಂ. ಮುಹಮ್ಮದ್ ಅಲಿ ಶಾಂತಿ ಅಂಗಡಿ ಅವರನ್ನು ಘಟಕದ ವತಿಯಿಂದ ಅಭಿನಂದಿಸಲಾಯಿತು. ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕಾದ್ಯಕ್ಷ ರಶೀದ್...

ನೇತ್ರಾವತಿ ನದಿಗೆ ಈಜಲು ಹೋದ ಬಾಲಕ ನೀರುಪಾಲು

ಬಂಟ್ವಾಳ : ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ಶನಿವಾರ ಸಂಜೆ ವೇಳೆಗೆ ಸಂಭವಿಸಿದೆ. ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ನೀರುಪಾಲಾದ...