Tuesday, October 1, 2024

ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಭಂಡಾರಿ ಬೊಟ್ಯಾಡಿ ಫೈನಲ್…..

ಬಂಟ್ವಾಳ: ಕೋಟ ಶ್ರೀನಿವಾಸ ಪೂಜಾರಿ ಅವರ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಭಂಡಾರಿ ಬೊಟ್ಯಾಡಿ ಅವರನ್ನು ಘೋಷಣೆ ಮಾಡಲಾಗಿದೆ.

ಯುವಮೋರ್ಚಾ ಜಿಲ್ಲಾಧ್ಯಕ್ಷನಾಗಿ ಮಿಂಚಿದ ಇವರು ಪರಿವಾರ ಸಂಘಟನೆಯಲ್ಲಿ ಮುಂಚೂಣಿಯ ನಾಯಕನಾಗಿ ಸೇವೆ ಸಲ್ಲಿಸಿದ್ದಾರೆ.

ಅತೀ ಕಡಿಮೆ ಜನಸಂಖ್ಯೆ ಇರುವ ಭಂಡಾರಿ ಸಮುದಾಯವನ್ನು ಗುರುತಿಸಿ ಈ ಬಾರಿ ಬಿಜೆಪಿ ಟಿಕೆಟ್ ‌ನೀಡುವ ಮೂಲಕ ಕೆಲ ಸಮುದಾಯಕ್ಕೆ ಮನ್ನಣೆ ನೀಡಿರುವ ಬಿಜೆಪಿ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಪ್ರಸ್ತುತ ದಿನಗಳಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿಯ ಆಯ್ಕೆಯ ಸಂದರ್ಭದಲ್ಲಿ ಜಾತಿಗಳನ್ನು ನೋಡಿಕೊಂಡು ದೊಡ್ಡ ಸಮುದಾಯಗಳಿಗೆ ಮಣೆ ಹಾಕುತ್ತಿದೆಎಂಬ ಆರೋಪ ಕೇಳಿ ಬರುತ್ತಿತ್ತು.ಆದರೆ ಪ್ರಸ್ತುತ ಬಿಜೆಪಿ ಯ ಈ ಅಚ್ಚರಿ ಯ ಆಯ್ಕೆಯಿಂದ ಅಂತಹದೊಂದು ಆರೋಪಕ್ಕೆ ತಕ್ಕ ಉತ್ತರ ನೀಡಿದಂತಾಗಿದೆ.

ಈ ಬಾರಿ ಎಂ.ಎಲ್.ಸಿ.ಚುನಾವಣೆಗೆ ಪ್ರಬಲ ಸಮುದಾಯಗಳಾದ ಬಂಟ ಸಮಾಜದ ನಳಿನ್ ಕುಮಾರ್ ಕಟೀಲು ಹಾಗೂ ಮೊಗವೀರ ಸಮಾಜದ ಪ್ರಮೋದ್ ಮದ್ವರಾಜ್ , ಬಿಲ್ಲವ ಸಮುದಾಯದ ಸತೀಶ್ ಸುವರ್ಣ ಹಾಗೂ ಗೀತಾಂಜಲಿ ಸುವರ್ಣ ಅವರ ಹೆಸರುಗಳು ಕೇಳಿ ಬಂದಿತ್ತು.

More from the blog

ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ ಹೆಚ್ಚಳ

ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿ ನವರಾತ್ರಿ ಹೊತ್ತಲ್ಲಿ ಗ್ರಾಹಕರಿಗೆ ಶಾಕ್ ನೀಡಿದೆ ಕಳೆದ ಮೂರು ತಿಂಗಳಿನಿಂದ ಕಮರ್ಷಿಯಲ್ ಸಿಲಿಂಡರ್ ದರ ಸತತ ಏರಿಕೆ ಕಾಣುತ್ತಿದೆ. ಇಂದಿನಿಂದ 19...

ವೇಣೂರು: ಅ.10- 11ರಂದು 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ

ಶ್ರೀ ಶಾರದಾ ಸೇವಾ ಟ್ರಸ್ಟ್ (ರಿ.) ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ವೇಣೂರು, ಇದರ ಆಶ್ರಯದಲ್ಲಿ 20 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಅಕ್ಟೋಬರ್ 10 ಮತ್ತು 11 ರಂದು ವೇಣೂರು ಶ್ರೀ...

ಪೋಷಣ್ ಮಾಸಾಚರಣೆ- 2024ರ ಸಮಾರೋಪ ಸಮಾರಂಭ

ಬಂಟ್ವಾಳ: ಬಂಟ್ವಾಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ರೋಟರಿ ಕ್ಲಬ್ ಬಿ.ಸಿ.ರೋಡು ಸಿಟಿ, ಸಜೀಪಮೂಡ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಹಾಗೂ ಬಂಟ್ವಾಳ ತಾಲೂಕು ಸ್ತ್ರೀ...

ಡ್ರಿಂಕ್ ಆಂಡ್ ಡ್ರೈವ್: ಕಾರು ಚರಂಡಿಗೆ,ಮೂವರಿಗೆ ಗಾಯ….

ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡು ಕಾರೊಂದು ಚರಂಡಿಗೆ ಬಿದ್ದು ಚಾಲಕ ಸೇರಿದಂತೆ ಮೂವರು ಗಾಯಗೊಂಡ ಘಟನೆ ಜಕ್ರಿ ಬೆಟ್ಟು ಮಣ್ಣಾಪು ಎಂಬಲ್ಲಿ ಇಂದು ಸಂಜೆ ನಡೆದಿದೆ. ಘಟನೆಯಲ್ಲಿ ಕೇರಳ ನಿವಾಸಿಗಳಾದ ಅರುಣ್, ಪ್ರಮೋದ್ ಮತ್ತು...