Wednesday, January 28, 2026

ಇಬ್ಬರು ಶಂಕಿತ ಉಗ್ರರ ಬಂಧನ ; ತೀರ್ಥಹಳ್ಳಿ 4 ಮನೆಗಳ ಮೇಲೆ ಪೊಲೀಸರ ದಾಳಿ

ಶಂಕಿತ ಉಗ್ರ ಶಾರೀಕ್ ಮೈಸೂರಿನಲ್ಲಿ ವಾಸವಾಗಿದ್ದ ಬಾಡಿಗೆ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಬಾಂಬ್ ತಯಾರಿಕೆಯ ಕಚ್ಛಾ ವಸ್ತುಗಳು ಲಭಿಸಿಸಿವೆ. ಇದೇ ವೇಳೆ ಪೊಲೀಸರ ತಂಡ ಇಬ್ಬರನ್ನು ವಶಕ್ಕೆ ಪಡೆದಕೊಂಡಿದೆ.

ಬಂಧಿತರ ಪೈಕಿ ಮಂಗಳೂರು ಮೂಲದ ನಿವಾಸಿ ಎಂದು ವರದಿಯಾಗಿದೆ. ಮತ್ತೋರ್ವ ಶಂಕಿತ ಉಗ್ರ ಶಾರೀಕ್​ಗೆ ಮೊಬೈಲ್ ನೀಡಿದ್ದನು. ಈ ಹಿನ್ನೆಲೆ ಆತನನ್ನು ಸಹ ಬಂಧಿಸಲಾಗಿದೆ ಎನ್ನಲಾಗಿದೆ.

ಮೈಸೂರಿನ ಮೆಟಗಾನಹಳ್ಳಿಯಲ್ಲಿ ಲೋಕನಾಯಕ ನಗರದ 10ನೇ ಕ್ರಾಸ್​ನಲ್ಲಿರುವ ಮೋಹನ್ ಕುಮಾರ್ ಎಂಬವರ ಮನೆಯಲ್ಲಿ ಶಾರೀಕ್ ರೂಂ ಬಾಡಿಗೆ ಪಡೆದುಕೊಂಡಿದ್ದನು. ಬಾಡಿಗೆ ಪಡೆಯುವ ವೇಳೆ ಪ್ರೇಮ್​ರಾಜ್​ ಹೆಸರಿನ ನಕಲಿ ಆಧಾರ್ ಕಾರ್ಡ್​ ನೀಡಿ, ಮೊಬೈಲ್ ರಿಪೇರಿ ತರಬೇತಿ ಪಡೆಯಲು ಬಂದಿರೋದಾಗಿ ಹೇಳಿದ್ದನು.

ಶಾರೀಕ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ನಿವಾಸಿಯಾಗಿದ್ದು. ಮಂಗಳೂರು ಆಟೋ ಬ್ಲಾಸ್ಟ್​​ ಹಿಂದೆ ಶಾರೀಕ್ ಪಾತ್ರ ಇರೋ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ ನಾಲ್ಕು ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಎರಡು ವರ್ಷಗಳ ಹಿಂದೆ ಮಂಗಳೂರಿನ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್​ಮೆಂಟ್ ಗೋಡೆ ಮೇಲೆ ಉಗ್ರ ಸಂಘಟನೆ ಲಷ್ಕರ್ ಪರವಾಗಿ ಬರಹ ಬರೆಯಲಾಗಿತ್ತು. ಈ ಪ್ರಕರಣದಲ್ಲಿ ಮಾಝ್​ ಮುನೀರ್ ಜೊತೆ ಶಾರೀಕ್​​ನನ್ನು ಬಂಧಿಸಲಾಗಿತ್ತು.

More from the blog

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...

ಸಜೀಪ : ಜ.28, 29,30ರಂದು ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್

ಬಂಟ್ವಾಳ : ಜಲಾಲಿಯ್ಯಾ ಜುಮಾ ಮಸ್ಜಿದ್, ಚಟ್ಟೆಕ್ಕಲ್, ಸಜಿಪ ಇದರ ಆಶ್ರಯದಲ್ಲಿ ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್ ಬುರ್ದಾ ಮಜ್ಲಿಸ್ ಜಿಸ್ತಿಯಾ ಖುತ್‌ಬಿಯತ್ ಜ.28, 29,30 ರಂದು ಜಲಾಲಿಯ್ಯ ಜುಮಾ ಮಸೀದಿ...

ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ – ಒಡಿಯೂರುಶ್ರೀ

ವಿಟ್ಲ: ಸದೃಢ ದೇಶ ನಿರ್ಮಾಣದಲ್ಲಿ ಸೈನಿಕರ ಪರಿಶ್ರಮ, ತ್ಯಾಗ ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದೆ. ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ನುಡಿದರು. ಅವರು ಒಡಿಯೂರು ರಾಜಾಂಗಣದಲ್ಲಿ...

ವಿಟ್ಲ ಪಡ್ನೂರು : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ವಿಟ್ಲ: ವಿಟ್ಲ ಪಡ್ನೂರು ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪವನ್ನು ಬದಲಾಯಿಸಿದ ಕೇಂದ್ರ ಸರಕಾರದ ಧೋರಣೆಯ ವಿರುದ್ಧ ವಿಟ್ಲ ಪಡ್ನೂರು ಗ್ರಾಮ...