ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿ ಹಬ್ಬ ಮಹೋತ್ಸವದ ಪ್ರಯುಕ್ತ ಜು.10ರಂದು ವಿಟ್ಲ ಪಂಚಲಿಂಗೇಶ್ವರ ಸದನದಲ್ಲಿ ನಡೆದ ವಿಟ್ಲ ವಲಯದ ಪೂರ್ವಭಾವಿ ಸಭೆಯಲ್ಲಿ ಸಮಿತಿ ರಚನೆಯನ್ನು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯಿತು.


ವೇದಿಕೆಯಲ್ಲಿ ಮಾಣಿಲ ಕ್ಷೇತ್ರದ ಕೇಂದ್ರ ಸಮಿತಿಯ ಗೌರವ ಮಾರ್ಗದರ್ಶಕರು ಪ್ರಸಾದ್ ಪಾಂಗಾಣ್ಣಾಯ, ಸಂಚಾಲಕ ತಾರಾನಾಥ ಕೊಟ್ಟಾರಿ, ಕಾರ್ಯಾಧ್ಯಕ್ಷ ಅಶೋಕ್ ಶೆಟ್ಟಿ ಸರಪಾಡಿ, ಪ್ರಧಾನ ಕಾರ್ಯದರ್ಶಿ ದೇವಪ್ಪ ಕುಲಾಲ್ ಪಂಜಿಕಲ್ಲು, ಉಪಾಧ್ಯಕ್ಷ ಕೃಷ್ಣಯ್ಯ ವಿಟ್ಲ ಅರಮನೆ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಕಾರ್ಯದರ್ಶಿ ಪದ್ಮನಾಭ ಕಟ್ಟೆ ವಿಟ್ಲ ನಿರೂಪಿಸಿ, ರಾಜೇಶ್ R.K ಧನ್ಯವಾದ ಸಮರ್ಪಿಸಿದರು. ಸಭೆಯಲ್ಲಿ ಕಾರ್ಯಕಾರಿಣಿ ಪ್ರಮುಖರು, ಸದಸ್ಯರೆಲ್ಲರೂ ಉಪಸ್ಥಿತರಿದ್ದರು. 48ದಿನಗಳ ಪರ್ಯಂತ ಸಾಮೂಹಿಕ ಶ್ರೀ ಲಕ್ಷ್ಮೀಪೂಜೆ ಜು.16-ಆ.25 ತನಕ ನಡೆಯಲಿದ್ದು, ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಆ.25-27ರವರೆಗೆ ನಡೆಯಲಿದೆ. ಇದೇ ಸಂದರ್ಭದಲ್ಲಿ ವರಮಹಾಲಕ್ಷ್ಮೀ ವೃತಾಚರಣೆ ಬೆಳ್ಳಿಹಬ್ಬ ಮಹೋತ್ಸವದ ವಿಟ್ಲ ವಲಯ ಸಮಿತಿ ರಚಿಸಲಾಯಿತು.












