Saturday, April 13, 2024

ಕಕ್ಯಪದವು ಶ್ರೀ ಬ್ರಹ್ಮ ಬದರ್ಕಳ ಗರಡಿ ಕ್ಷೇತ್ರ ದೃಢ ಕಲಶ, ಅಭಿನಂದನೆ

ಬಂಟ್ವಾಳ : ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ತೌಳವ ದ್ರಾವಿಡ ಶೈಲಿಯಲ್ಲಿ, ಸಂಪೂರ್ಣ ಶಿಲಾಮಯವಾಗಿ ಪುನರ್ನಿರ್ಮಾಣಗೊಂಡ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಕೊಡಮಣಿತ್ತಾಯಿ, ದೈವೊಂಕುಳು, ಮಾಯಂದಾಲ್, ಬ್ರಹ್ಮ ಬದರ್ಕಳ ಗರಡಿ ಕ್ಷೇತ್ರದಲ್ಲಿ ಶನಿವಾರ ದೃಢ ಕಲಶ ಮತ್ತು ಅಭಿನಂದನಾ ಕಾರ್ಯಕ್ರಮ ಜರಗಿತು.
ಕಕ್ಯ ಶ್ರೀನಿವಾಸ ಅರ್ಮುಡ್ತಾಯರ ಮಾರ್ಗದರ್ಶನದಲ್ಲಿ, ಕ್ಷೇತ್ರದ ಆಸ್ರಣ್ಣ ರಾಜೇಂದ್ರ ಅರ್ಮುಡ್ತಾಯ, ಸುಽಂದ್ರ ಅರ್ಮುಡ್ತಾಯ ಅವರ ಮುಂದಾಳತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.


ಬೆಳಗ್ಗೆ ನವಕ ಕಲಶ ಪ್ರಧಾನ ಹೋಮ, ಕಲಶಾಭಿಷೇಕ, ಪರ್ವಗಳು, ಬಳಿಕ ಶ್ರೀ ಕಡಂಬಿಲ್ತಾಯಿ, ಕೊಡಮಣಿತ್ತಾಯಿ, ದೈವೊಂಕುಳು, ಮಾಯಂದಾಲ್ ಮತ್ತು ಬದರ್ಕಳಿಗೆ ದೃಢ ಕಲಶ ನಡೆಯಿತು. ಬಳಿಕ ಅಭಿನಂದನಾ ಕಾರ್ಯಕ್ರಮ, ಅನ್ನ ಸಂತರ್ಪಣೆ ನಡೆಯಿತು.
ಮಾಜಿ ಸಚಿವ, ಪುನರ್ ನಿರ್ಮಾಣ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ, ಅಧ್ಯಕ್ಷ ಬಿ. ಪದ್ಮಶೇಖರ ಜೈನ್, ಮೋಕ್ತೇಸರ ಕುಟುಂಬಸ್ಥರಾದ ರಾಜವೀರ್ ಜೈನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲ್ಯಾನ್, ವಾಸ್ತು ಶಿಲ್ಪಿ ಪ್ರಮಲ್ ಕುಮಾರ್, ಶಿಲ್ಪಿಗಳಾದ ಜಯರಾಮ ಆಚಾರ್ಯ, ಸದಾಶಿವ ಗುಡಿಗಾರ, ಪ್ರಮುಖರಾದ ಸೇಸಪ್ಪ ಕೋಟ್ಯಾನ್,ಚಿತ್ತರಂಜನ್ ಕಂಕನಾಡಿ, ರೋಹಿನಾಥ ಪಾದೆ, ಎ. ಚೆನ್ನಪ್ಪ ಸಾಲ್ಯಾನ್ ಆಜೋಡಿ, ಕೆ.ಮೋನಪ್ಪ ಪೂಜಾರಿ ಕಂಡೆತ್ಯಾರು, ವಿಶ್ವನಾಥ ಸಾಲ್ಯಾನ್ ಬಿತ್ತ, ಡೀಕಯ ಬಂಗೇರ ಕೆಳಗಿನ ಕರ್ಲ, ದಾಮೋದರ ನಾಯಕ್ ಉಳಿ, ರವಿ ಪೂಜಾರಿ ಚಿಲಿಂಬಿ, ಕೆ. ಮೋನಪ್ಪ ಪೂಜಾರಿ ಕಂಡೆತ್ಯಾರು, ಡಾ. ರಾಜಾರಾಮ ಕೆ.ಬಿ., ಡಾ. ದಿನೇಶ್ ಬಂಗೇರ, ಇಂದಿರೇಶ್, ಗುಣಕರ ಅಗ್ನಾಡಿ, ಚಿದಾನಂದ ಕಡೇಶಿವಾಲಯ, ಪ್ರಶಾಂತ್ ಪುಂಜಾಲಕಟ್ಟೆ, ಜಾರಪ್ಪ ಪೂಜಾರಿ, ಬೇಬಿ ಕೃಷ್ಣಪ್ಪ, ಧರ್ಣಪ್ಪ ಪೂಜಾರಿ, ರೋಹಿನಾಥ ಪಟ್ರಾಡಿ, ನವೀನ್ ಕುಮಾರ್, ಸಂಪತ್ ಕುಮಾರ್ ಶೆಟ್ಟಿ, ಚಂದ್ರಶೇಖರ ಕಂರ್ಬಡ್ಕ, ಗುಣಶೇಖರ ಕೊಡಂಗೆ, ಸಂಜೀವ ಪೂಜಾರಿ ಕೇರ್ಯ, ವೀರೇಂದ್ರ ಕುಮಾರ್ ಜೈನ್, ಸಂಜೀವ ಗೌಡ ಅಗಲ, ಚಿದಾನಂದ ರೈ, ಚೇತನ್ ಹೂರ್ದೊಟ್ಟು, ಜಗದೀಶ ಕೊಲ, ಯತೀಶ್ ಶೆಟ್ಟಿ, ವಾಸುದೇವ ಮಯ್ಯ, ಗಣೇಶ್ ಕೆ., ಶ್ರೀಧರ ಆಚಾರ್ಯ, ಗುರುಪ್ರಕಾಶ್, ರಾಜೀವ ಕಕ್ಯಪದವು, ಸುಂದರ ದೇವಾಡಿಗ, ಪರಮೇಶ್ವರ ನಾಯ್ಕ, ರಾಮಯ್ಯ ಭಂಡಾರಿ, ಜಯಾನಂದ ಪೂಜಾರಿ, ತಿಲಕ್, ಪವನ್ ಮತ್ತಿತರರು ಭಾಗವಹಿಸಿದ್ದರು. ಬಳಿಕ ಅನ್ನ ಸಂತರ್ಪಣೆ ನಡೆಯಿತು. ಸಾವಿರಾರು ಭಕ್ತಾಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...