Wednesday, April 17, 2024

ಇಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಹುಣ್ಣಿಮೆಯ ಪ್ರಯುಕ್ತ ಕಾರ್ತಿಕ ದೀಪೋತ್ಸವ

ವಿಟ್ಲ : ಇಂದು ಮಂಗಳವಾರ ಕಾರ್ತಿಕ ಹುಣ್ಣಿಮೆಯ ಪ್ರಯುಕ್ತ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ 11.30 ಕ್ಕೆ ದೇವರ ಪಲ್ಲಕ್ಕಿ ಸವಾರಿ ಜಠಾಧಾರಿ ಕಟ್ಟೆಗೆ ಹೋಗಿ ಮಧ್ಯಾಹ್ನ ವನಭೋಜನ ನಡೆಯಲಿದೆ. ರಾತ್ರಿ 7 ಗಂಟೆಯಿಂದ ಕಾರ್ತಿಕ ದೀಪೋತ್ಸವ, ಉತ್ಸವ ಬಲಿ, ಚಂದ್ರಮಂಡಲೋತ್ಸವ, ಕಟ್ಟೆ ಪೂಜೆ, ಶ್ರೀ ಪಂಚಲೊಂಗೇಶ್ವರ ಸನ್ನಿಧಿಯಲ್ಲಿ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

More from the blog

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಪುಣಚ: ಸೇತುವೆ ಕುಸಿತ ಪ್ರಕರಣ : ಗುತ್ತಿಗೆದಾರರ ವಿರುದ್ದ ಪ್ರಕರಣ

ವಿಟ್ಲ: ವಿಟ್ಲದ ಪುಣಚ ಗ್ರಾಮದ ಬರೆಂಜಾ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆ ಕುಸಿದುಬಿದ್ದ ಅವಘಡದಲ್ಲಿ ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದಾರೆ. ಇನ್ನೊಂದೆಡೆ ಈ ಪ್ರಕರಣಕ್ಕೆ...

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...