Sunday, April 7, 2024

ಕೊಟ್ಟ ಮಾತಿನಂತೆ ಕೌಶಿಕ್ ನ ವಿದ್ಯಾಭ್ಯಾಸಕ್ಕೆ ನೆರವಾದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

ಬಂಟ್ವಾಳ: ಕಾಲಿನ ಬೆರಳಿನ ಮೂಲಕ ಪರೀಕ್ಷೆ ಬರೆದು ರಾಜ್ಯದ ಜನತೆಯ ಗಮನ ಸೆಳೆದಿದ್ದ ಬಂಟ್ವಾಳ ಕಂಚಿಕಾರ ಪೇಟೆಯ ಕೌಶಿಕ್ ನ ವಿದ್ಯಾಭ್ಯಾಸ ಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಜ್ ಉಳಿಪ್ಪಾಡಿಗುತ್ತು ಅವರು ನೀಡಿದ ಭರವಸೆ ಯಂತೆ ನೆರವಾಗಿದ್ದು, ಇದೀಗ ವಿದ್ಯಾ ರ್ಥಿ ಮೂಡಬಿದಿರೆಯ ಆಳ್ವಾಸ ಪದವಿ ಪೂರ್ವ ಕಾಲೇಜಿಗೆ ಸೇರ್ಪಡೆ ಗೊಂಡಿದ್ದಾನೆ.
ಮೂಡಬಿದಿರೆಯ ಶಿಕ್ಷಣ ಸಂಸ್ಥೆಗಳ ಆಧ್ಯಕ್ಷ ಡಾ.ಮೋಹನ್ ಆಳ್ವ ಅವರ ಜೊತೆ ಮಾತುಕತೆ ನಡೆಸಿದ ಶಾಸಕರು ಶಿಕ್ಷಣ ಕ್ಕೆ ದಾಖಲಾತಿ ವ್ಯವಸ್ಥೆ ಗೆ ಕ್ರಮಕೈಗೊಂಡಿದ್ದಾರೆ.
ಶಾಸಕರ ಮಾತಿನಂತೆ ಮೋಹನ್ ಆಳ್ವ ಅವರು ಕೌಶಿಕ್ ಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ವ್ಯವಸ್ಥೆ ಕಲ್ಲ್ಪಿಸಿದ್ದಾರೆ.
ಕೌಶಿಕ್ ನ ಆಸೆಯಂತೆ ಶಾಸಕರು ಮುತುವರ್ಜಿ ವಹಿಸಿ
ಮೋಹನ್ ಆಳ್ವ ಅವರು ವಾಣಿಜ್ಯ ವಿಭಾಗದಲ್ಲಿ ಪಿ.ಯು‌.ಸಿ. ಶಿಕ್ಷಣಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.


ಕೊಟ್ಟ ಮಾತು ಉಳಿಸಿದ ಶಾಸಕರು
ಕಾಲಿನ ಬೆರಳಿನ ಮೂಲಕ ಎಸ್.ಎಸ್ .ಎಲ್.ಸಿ.ಪರೀಕ್ಷೆ ಬರೆದು ರಾಜ್ಯದಲ್ಲಿ ಸುದ್ದಿಯಾದ ಸಂದರ್ಭದಲ್ಲಿ ಕೌಶಿಕ್ ನ ಫಲಿತಾಂಶ ವನ್ನು ನೋಡಿಕೊಂಡು ಆತನ ಇಚ್ಚೆ ಯ ವಿಷಯದಲ್ಲಿ ಮುಂದಿನ ವಿದ್ಯಾಭ್ಯಾಸ ದ ಸಂಪೂರ್ಣ ಜವಬ್ದಾರಿ ಯನ್ನು ವಹಸುವುದಾಗಿ ಭರವಸೆ ನೀಡಿದ್ದರು .
ಅವರು ನೀಡಿದ ಮಾತಿನಂತೆ ಕೌಶಿಕ್ ನ ಪಿ.ಯು.ಸಿ.ವಿದ್ಯಾಭ್ಯಾಸ ಕ್ಕೆ ದಾಖಲಾತಿ ಯನ್ನು ಮಾಡಿಸಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...