Monday, April 8, 2024

ಮಗುವಿನ ಚಿಕಿತ್ಸೆ ವೆಚ್ಚಕ್ಕಾಗಿ ವಿಭಿನ್ನ ವೇಷ ಧರಿಸಿ ಪೊಳಲಿಯಲ್ಲಿ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ನ ವತಿಯಿಂದ ಧನ ಸಂಗ್ರಹ

ಬಂಟ್ವಾಳ : ತುಳುನಾಡ ಪೊರ್ಲು ಸೇವಾ ಟ್ರಸ್ಟ್ (ರಿ.) ನ ವತಿಯಿಂದ ಮೂಡಬಿದ್ರೆ ತಾಲೂಕಿನ ಪಡು ಮಾರ್ನಾಡು ನಡಿಲ್ಲ ನಡುಮನೆಯ ಬಾಲಕೃಷ್ಣ ಮತ್ತು ಕುಸುಮಾವತಿ ದಂಪತಿಗಳ 13 ವರ್ಷದ ಪುತ್ರಿ ವೈಷ್ಣವಿಯ ಚಿಕಿತ್ಸೆ ಗಾಗಿ ಪೊಳಲಿಯಲ್ಲಿ ಕಾರ್ಯಕರ್ತರು ವಿಭಿನ್ನ ವೇಷದ ಮೂಲಕ ಧನಸಂಗ್ರಾಹದ ಕಾರ್ಯದಲ್ಲಿ ತೊಡಗಿದ್ದಾರೆ.

ವೈಷ್ಣವಿ ಅವರು ಇತ್ತೀಚೆಗೆ ನಡೆದ ರಸ್ತೆ ಅಪಘಾತದಲ್ಲಿ ದೇಹದ ತೀವ್ರ ವಾಗಿ ಜಖಂಗೊಂಡಿದೆ.

ಪ್ರಸ್ತುತ ಉಡುಪಿ ಯ ಆದರ್ಶ ಆಸ್ಪತ್ರೆಯ ಲ್ಲಿ ತುರ್ತು ನಿಗಾ ಘಟಕದಲ್ಲಿ ದಾಖಲಾಗಿದ್ದು ಇವಳ ಚಿಕಿತ್ಸೆ ಗೆ ಸುಮಾರು 3 ಲಕ್ಷಕ್ಕೂ ಅಧಿಕ ವೆಚ್ಚದ ಅಗತ್ಯವಿದೆ.

ಬಡಕುಟುಂಬದ ಈ ಮಗುವಿನ ಚಿಕಿತ್ಸೆ ಗಾಗಿ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವಿಭಿನ್ನ ವೇಷ ಧರಿಸಿ ಪೊಳಲಿ ಶ್ರೀರಾಜರಾಜೇಶ್ವರಿ ದೇವಾಲಯದ ಬ್ರಹ್ನಕಲಶೋತ್ಸವದ ಸಂದರ್ಭ ಹಣ ಸಂಗ್ರಹದ ಕಾರ್ಯದಲ್ಲಿ ತೊಡಗಿದೆ.

ಪೊಳಲಿಯಲ್ಲಿ 12 ಜನರ ತಂಡ ಇಂದು ಮುಂಜಾನೆ 6 ಗಂಟೆಯಿಂದ ರಾತ್ರಿ 12 ಗಂಟೆವರೆಗೆ ಹಣಸಂಗ್ರಹದ ಕಾರ್ಯದಲ್ಲಿ ತೊಡಗಿದ್ದರು, ಇದಲ್ಲದೆ ಇತ್ತೀಚಿಗೆ ನಡೆದ ಕಕ್ಯೆಪದವು ಬ್ರಹ್ಮ ಬೈದರ್ಕಲ ಗರಡಿಯಲ್ಲಿ ಕೂಡ ಹಣ ಸಂಗ್ರಾಹ ಮಾಡಲಾಗಿತ್ತು ಟ್ರಸ್ಟ್ ನ ಅಧ್ಯಕ್ಷ ನವೀನ್ ಪಿ.ಮಿಜಾರ್ ತಿಳಿಸಿದರು.

ಕಳೆದ 54 ತಿಂಗಳ ಹಿಂದೆ ರಚನೆಗೊಂಡ ಈ ಟ್ರಸ್ಟ್ 400 ಸೇವಾ ಯೋಜನೆಯೊಂದಿಗೆ ಸುಮಾರು 37 ಲಕ್ಷ ನೆರವನ್ನು ಸಮಾಜದ ಬೇರೆ ಬೇರೆ ಸ್ತರದ ಆಶಕ್ತರಿಗೆ ನೀಡಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಮಗುವಿನ ಚಿಕಿತ್ಸೆ ಗೆ ನೆರವು ನೀಡುವ ಮನಸ್ಸು ಇರುವ ವ್ಯಕ್ತಿಗಳು ದೂರವಾಣಿ ಸಂಖ್ಯೆ: 9880956086

ಹಾಗೂ ಸಿಂಡಿಕೇಟ್ ಬ್ಯಾಂಕ್ ಖಾತೆ ನಂ.02702200018893 ಇದಕ್ಕೂ ನೇರವಾಗಿ ಹಾಕಬಹುದು.

More from the blog

ಇಂದು ಸಂಪೂರ್ಣ ಸೂರ್ಯಗ್ರಹಣ : ಈ ರಾಶಿಯವರಿಗೆ ಕಾದಿದೆ ಆಪತ್ತು

ವರ್ಷದ ಮೊದಲ ಸೂರ್ಯಗ್ರಹಣ ಇಂದು ಸಂಭವಿಸುತ್ತಿದೆ. ಸುಮಾರು 54 ವರ್ಷಗಳ ಬಳಿಕ ಸಂಭವಿಸುತ್ತಿರುವ ಸುದೀರ್ಘ ಸೂರ್ಯಗ್ರಹಣ ಇದಾಗಿದ್ದು, ಮಾಹಿತಿಗಳ ಪ್ರಕಾರ ಏಪ್ರಿಲ್ 8 ರಂದು ಸೂರ್ಯಗ್ರಹಣ ರಾತ್ರಿ 9.12 ರಿಂದ 1.25 ರವರೆಗೆ...

ಬಿಳಿನೆಲೆಗೆ ಬಂದ ನಕ್ಸಲರಿಗೆ ಶೋಧ : 6 ಮೊಬೈಲ್‌, 1 ಲ್ಯಾಪ್‌ಟಾಪ್‌ ಚಾರ್ಜ್‌ ಮಾಡಿಸಿಕೊಂಡ ನಕ್ಸಲರು

ಸುಬ್ರಹ್ಮಣ್ಯ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿನ ಅರಣ್ಯದಂಚಿನ ಮನೆಗೆ ಗುರುವಾರ ರಾತ್ರಿ ಭೇಟಿ ನೀಡಿದ್ದ ಮುಸುಕುಧಾರಿ, ಶಸ್ತ್ರಧಾರಿ ನಕ್ಸಲರ ತಂಡದಲ್ಲಿ 6 ಮಂದಿ ಇದ್ದರು ಎನ್ನುವುದು ದೃಢಪಟ್ಟಿದೆ. ಬಂದವರೆಲ್ಲರೂ ಒಂದೇ ರೀತಿಯ...

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...