Friday, April 12, 2024

ಬಿಯರ್ ಸಾಗಿಸುತ್ತಿದ್ದ ಲಾರಿ ಅಪಘಾತ: 600ಕ್ಕೂ ಅಧಿಕ ಬಾಕ್ಸ್ ಬಿಯರ್ ಹೊತ್ತೊಯ್ದ ಜನರು!

ಚಿಕ್ಕಮಗಳೂರು: ಕೊರೋನ ಸೋಂಕು ತೀವ್ರವಾಗಿ ಹರಡುತ್ತಿರುವ ಭೀತಿಯ ನಡುವೆಯೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಪಘಾತಕ್ಕೀಡಾದ ಬಿಯರ್ ತುಂಬಿದ ಲಾರಿಯಿಂದ ಜನರು ಮುಗಿಬಿದ್ದು ಬಿಯರ್ ಬಾಟಲಿಗಳನ್ನು ಹೊತ್ತುಕೊಂಡು ಹೋಗಿರುವ ಘಟನೆ ಇಂದು ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಎಂಸಿ ಹಳ್ಳಿ ಸಮೀಪ ರಾಷ್ಟಿçÃಯ ಹೆದ್ದಾರಿಯಲ್ಲಿ ಇಂದು ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಲಾರಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದ್ದು ಮರ ಲಾರಿಯ ಮೇಲೆ ಬಿದ್ದು ಅಪಘಾತ ಸಂಭವಿಸಿದೆ. ಲಾರಿ ಚಾಲಕ ಅಪಾಯದಿಂದ ಪಾರಾಗಿದ್ದಾನೆ.

ಈ ಲಾರಿಯಲ್ಲಿ ಮೈಸೂರು ನಂಜನಗೂಡಿAದ ಕಿಂಗ್ ಫಿಷರ್ ಬಿಯರ್ ಸಾಗಿಸಲಾಗುತ್ತಿತ್ತು. ಲಾರಿಯಲ್ಲಿದ್ದ 1,150 ಬಾಕ್ಸ್ ಬಿಯರ್‌ಗಳಲ್ಲಿ 507 ಬಾಕ್ಸ್ಗಳು ಮಾತ್ರ ಉಳಿದಿವೆ. ಉಳಿದವುಗಳನ್ನು ಜನ ತೆಗೆದುಕೊಂಡು ಹೋಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಜನರನ್ನು ಚದುರಿಸಿದ್ದಾರೆ.

More from the blog

ಪ್ರಧಾನಿ ರೋಡ್ ಶೋ ಹಿನ್ನೆಲೆ : ಜೇನುಗೂಡು ತೆರೆವುಗೊಳಿಸಲು ಮಂಗಳೂರು ಪೊಲೀಸ್ ಆಯುಕ್ತರ ಆದೇಶ

ಮಂಗಳೂರು: ನಗರದಲ್ಲಿ ಏ.14ರಂದು ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ನಡೆಯಲಿರುವ ಮಾರ್ಗದಲ್ಲಿ ಇರುವ ಎಲ್ಲ ಜೇನುಗೂಡುಗಳನ್ನು ತೆರವುಗೊಳಿಸುವಂತೆ ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್‌ ಅವರು ಉಪಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ...

ಗುದನಾಳದಲ್ಲಿದ್ದ 58 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ

ಮಂಗಳೂರು: ದಮ್ಮಾಮ್‌ನಿಂದ ಆಗಮಿಸುತ್ತಿದ್ದ ಪ್ರಯಾಣಿಕರೊಬ್ಬರಿಂದ 58,78,880 ರೂಪಾಯಿ ಮೌಲ್ಯದ 812 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. ವಾಡಿಕೆಯ ಮೆಟಲ್ ಡಿಟೆಕ್ಟರ್ ಪರೀಕ್ಷೆಯ ಸಮಯದಲ್ಲಿ, ಪ್ರಯಾಣಿಕರ ಸೊಂಟದಿಂದ ಬೀಪ್...

ಆಯತಪ್ಪಿ ಬಾವಿಗೆ‌ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

ಮಂಗಳೂರು: ಬಾವಿಯಿಂದ ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯೋರ್ವರನ್ನು ಗುರುವಾರ ಕದ್ರಿ ಅಗ್ನಿಶಾಮಕ ಠಾಣೆಯವರು ರಕ್ಷಿಸಿದ್ದಾರೆ ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ. ಸಂಜೆ 5 ಗಂಟೆ...

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ: ಏಪ್ರಿಲ್​ 18 ರವರೆಗೆ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್​ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಆದರೆ ಇದೀಗ ವಿಪರೀತ ಸೆಕೆ...