Friday, April 12, 2024

ಕಾರ್ಮಿಕ ದಿನದ ಕಾನೂನು ಅರಿವು- ನೆರವು ಕಾರ್ಯಕ್ರಮ

ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲರ ಸಂಘ ಬಂಟ್ವಾಳ ಹಾಗೂ ಬಂಟ್ವಾಳ ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ ಕಾರ್ಮಿಕ ದಿನದ ಕಾನೂನು ಅರಿವು- ನೆರವು ಕಾರ್ಯಕ್ರಮ ಬಿ.ಸಿ.ರೋಡಿನ ಸ್ತ್ರೀಶಕ್ತಿ ಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಽÃಶೆ ಮತ್ತು ಜೆಎಂಎಫ್‌ಸಿ ಬಂಟ್ವಾಳ, ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷೆ ಭಾಗ್ಯಮ್ಮ ಮಾತನಾಡಿ, ಕಾರ್ಮಿಕರಿಗೆ ಕಾನೂನಿನ ಅರಿವು, ಇಲಾಖೆಯಿಂದ ಸಿಗುವ ಸರಕಾರಿ ಸೌಲಭ್ಯಗಳ ಕುರಿತು ಮಾಹಿತಿ ಇದ್ದಾಗ ಬಂಡವಾಳಶಾಹಿಗಳ ಶೋಷಣೆಯಿಂದ ದೂರವಾಗುವ ಜತೆಗೆ ಸ್ವಾಭಿಮಾನ ಬದುಕು ಸಾಧ್ಯವಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸಿಡಿಪಿಒ ಗಾಯತ್ರಿ ಕಂಬಳಿ ಮಾತನಾಡಿ, ಕಾರ್ಮಿಕರ ಹೋರಾಟದ ಭಾಗವಾಗಿ ಕಾರ್ಮಿಕ ದಿನವನ್ನು ಆಚರಿಸಲಾಗುತ್ತಿದ್ದು, ಅದರ ಬಳಿಕವೇ ಕಾರ್ಮಿಕರ ಹಕ್ಕುಗಳು, ಕರ್ತವ್ಯದ ಅವಽ ಮೊದಲಾದ ಕಾನೂನುಗಳು ರೂಪಿತಗೊಂಡವು ಎಂದರು.
ಕಾರ್ಮಿಕರ ಹಕ್ಕುಗಳು ಹಾಗೂ ಕರ್ತವ್ಯದ ಕುರಿತು ಮಾಹಿತಿ ನೀಡಿದ ಬಂಟ್ವಾಳದ ಕಾರ್ಮಿಕ ನಿರೀಕ್ಷಕಿಮೆರ್ಲಿನ್ ಡಿಸೋಜ ಅವರು ಮಾಹಿತಿ ನೀಡಿದರು.
ವೇದಿಕೆಯಲ್ಲಿ ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ಬಿ.ಗಣೇಶಾನಂದ ಸೋಮಯಾಜಿ, ಸಹಾಯಕ ಸರಕಾರಿ ಅಭಿಯೋಜಕಿ ಹರಿಣಿಕುಮಾರಿ ಡಿ, ವಕೀಲರ ಸಂಘದ ಉಪಾಧ್ಯಕ್ಷ ಮೋಹನ್ ಪ್ರಭು ಉಪಸ್ಥಿತರಿದ್ದರು.

More from the blog

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ...