Wednesday, January 28, 2026

ಕೊನೆಗೂ ಭಾರತ್ ಬಯೋಟೆಕ್‌ನಿಂದ ಕರ್ನಾಟಕಕ್ಕೆ ‘ಕೋವಾಕ್ಸಿನ್’ ನೇರ ಪೂರೈಕೆ

ಬೆಂಗಳೂರು: ಭಾರತ್ ಬಯೋಟೆಕ್ ತನ್ನ ಕೊರೊನಾ ಲಸಿಕೆ ಕೋವಾಕ್ಸಿನ್ ಸರಬರಾಜನ್ನು ಮುಂದುವರಿಸುವುದಾಗಿ ಮಂಗಳವಾರ ತಿಳಿಸಿದ್ದು ಮೇ 1ರಿಂದ ಲಸಿಕೆಯನ್ನು 18 ರಾಜ್ಯಗಳಿಗೆ ಸರಬರಾಜು ಮಾಡಲಾಗಿದೆ ಎಂದು ಹೇಳಿದೆ.

ಈ ಹಿಂದೆ ಕರ್ನಾಟಕ ಹೊರತುಪಡಿಸಿ 14 ರಾಜ್ಯಗಳಿಗೆ ಲಸಿಕೆ ನೇರ ಪೂರೈಕೆ ಮಾಡುವುದಾಗಿ ತಿಳಿಸಿದ್ದ ಸಂಸ್ಥೆ ಈಗ ಕರ್ನಾಟಕ ಸೇರಿದಂತೆ 18 ರಾಜ್ಯಗಳಿಗೆ ಸರಬರಾಜು ಮಾಡಲಾಗುತ್ತದೆ ಎಂದು ಹೇಳಿದೆ.

ಈ ಹಿಂದೆ ಹೈದರಾಬಾದ್ ಮೂಲದ ಈ ಸಂಸ್ಥೆಯು ಕೇಂದ್ರ ಸರ್ಕಾರವು ಪಡೆದ ಹಂಚಿಕೆಯ ಆಧಾರದ ಮೇಲೆ ಆಂಧ್ರಪ್ರದೇಶ, ಅಸ್ಸಾಂ, ಛತ್ತೀಸಗಢ, ಗುಜರಾತ್, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಮಧ್ಯಪ್ರದೇಶ, ಒಡಿಶಾ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳಕ್ಕೆ ಲಸಿಕೆಗಳನ್ನು ನೇರವಾಗಿ ಕೋವಾಕ್ಸಿನ್‌ ಪೂರೈಸುತ್ತಿತ್ತು.

ಇದೀಗ ಈ ಬಗ್ಗೆ ಟ್ವೀಟ್‌ ಮಾಡಿರುವ ಕಂಪನಿಯ ಜಂಟಿ ವ್ಯವಸ್ಥಾಪಕ ನಿರ್ದೇಶಕ ಸುಚಿತ್ರಾ ಎಲಾ, ”ಕೋವಾಕ್ಸಿನ್ ಮೇ 10 ರಂದು ಸರಬರಾಜು ಆಗಿದೆ. 18 ರಾಜ್ಯಗಳಿಗೆ ಸರಬರಾಜು ಮಾಡಲಾಗುತ್ತಿದೆ. ಕೆಲವು ರಾಜ್ಯಗಳು ನಮ್ಮ ಈ ಹಿಂದಿನ ಸರಬರಾಜು ಉದ್ದೇಶದ ಬಗ್ಗೆ ದೂರಿರುವುದು ತಂಡಗಳಿಗೆ ಸಾಕಷ್ಟು ನಿರಾಶೆ ಉಂಟು ಮಾಡಿದೆ. ನಮ್ಮ 50 ಉದ್ಯೋಗಿಗಳು ಕೊರೊನಾ ಕಾರಣದಿಂದಾಗಿ ಕೆಲಸ ನಿರ್ವಹಿಸುತ್ತಿಲ್ಲ. ಆದರೂ ನಾವು ನಿಮಗಾಗಿ ಕೊರೊನಾ ಲಾಕ್‌ಡೌನ್‌ಗಳ ನಡುವೆಯೂ 24×7 ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ” ಎಂದು ಹೇಳಿದ್ದಾರೆ.

ಹಾಗೆಯೇ ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ದೆಹಲಿ, ಗುಜರಾತ್, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ತಮಿಳುನಾಡು, ತ್ರಿಪುರಾ, ತೆಲಂಗಾಣ, ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಿಗೆ ಕೊರೊನಾ ಲಸಿಕೆ ಪೂರೈಸುವುದಾಗಿ ತಿಳಿಸಿದ್ದಾರೆ.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...