Sunday, June 29, 2025

ಬದನಡಿ: ಪರಿಸರ ಸಂರಕ್ಷಣಾ ಅಭಿಯಾನ

ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ‌ ಬದನಡಿ ಕೊಯಿಲ ಇದರ ವತಿಯಿಂದ ಪರಿಸರ ಸಂರಕ್ಷಣೆ ನಮ್ಮಲ್ಲೆರ ಹೊಣೆ ಎನ್ನುವ ಸಂಕಲ್ಪದಡಿ ಕೊಯಿಲ ಗ್ರಾಮದ ಕೈತ್ರೋಡಿ ಕ್ವಾಟ್ರಸ್ ನ ರುದ್ರಭೂಮಿಯಲ್ಲಿ ಸ್ವಚ್ಚತಾ ಅಭಿಯಾನ‌ ಹಾಗೂ ಗಿಡನೆಡುವ ಕಾರ್ಯಕ್ರಮ ನಡೆಯಿತು. ಕೊರಗಜ್ಜ ಕ್ಷೇತ್ರದ ಮೋಕ್ತೇಸರ ಲೋಕೆಶ್ ಕೈತ್ರೋಡಿ ಉದ್ಘಾಟಿಸಿದರು. ಭಜನಾ ಮಂಡಳಿ ಸಂಸ್ಥಾಪಕ ರವೀಂದ್ರ ಪೂಜಾರಿ ಬದನಡಿ, ಅಧ್ಯಕ್ಷ ದಿನೇಶ್ ಸುವರ್ಣ ರಾಯಿ,ಮಹಿಳಾ ಅಧ್ಯಕ್ಷೆ ಶ್ರೀಮತಿ ಆಶಾ, ಕಾರ್ಯದರ್ಶಿ ರಕ್ಷಿತ್ ಅಂತರ ಹಾಗೂ ಭಜನಾ ಮಂಡಳಿ‌ಯ 80ಸದಸ್ಯರು ಉಪಸ್ಥಿತರಿದ್ದರು‌. ರುದ್ರಭೂಮಿಯ 0.60 ಎಕರೆ ಭೂಮಿಯಲ್ಲಿ ಫಲನೀಡುವ ಹಲಸು, ಗೇರು, ಸಫೋಟ, ಬಾದಾಮಿ, ರಾಂಬೂಟನ್, ಸಾಗುವನಿ ಈಗೆ 85 ಗಿಡಗಳನ್ನು ನೆಟ್ಟು ಪ್ರಕೃತಿ ಹಾಗೂ ಪಕ್ಷಿ‌ಸಂಕುಲದ ಉಳಿವಿಗಾಗಿ ಸಂಕಲ್ಪತೊಡಲಾಯಿತು.

More from the blog

ನಿರ್ಧಿಷ್ಟ ಗುರಿಯೊಂದಿಗೆ ಯುವವಾಹಿನಿಯ ಸಂಘಟಿತ ಪಯಣ : ಭುವನೇಶ್ ಪಚ್ಚಿನಡ್ಕ..

ಬಂಟ್ವಾಳ : ನಿರ್ದಿಷ್ಟ ಗುರಿಯೊಂದಿಗೆ ಸಾಧನಾ ಪಥದಲ್ಲಿ ಯುವವಾಹಿನಿ ಸಂಘಟಿತವಾಗಿ ಪಯಣಿಸುತ್ತಿದೆ ಎಂದು ಯುವವಾಹಿನಿ ಬಂಟ್ವಾಳ ಘಟಕದ ರಜತವರ್ಷದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು. ಅವರು ರವಿವಾರ ಬಿ ಸಿ ರೋಡ್ ಯುವವಾಹಿನಿ ಭವನದಲ್ಲಿ...

ಮಕ್ಕಳಲ್ಲಿ ಹೃದಯಾಘಾತಕ್ಕೆ ಮೊಬೈಲ್‌ ಬಳಕೆ ಕಾರಣ – ಆಘಾತಕಾರಿ ವರದಿ ಬೆಳಕಿಗೆ..

ಇತ್ತೀಚೆಗೆ ವಯಸ್ಕರು ಮಾತ್ರವಲ್ಲದೆ ಯುವ ಜನತೆ, ಮಕ್ಕಳಲ್ಲಿ ಕೂಡಾ ಹೃದಯಾಘಾತ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ಸಣ್ಣ ವಯಸ್ಸಿನಲ್ಲಿಯೇ ಆನೇಕರು ಹೃದಯಾಘಾತದಿಂದ ಇಹಲೋಕ ತ್ಯಜಿಸುತ್ತಿದ್ದಾರೆ. ಅದರಲ್ಲೂ ಮಕ್ಕಳಲ್ಲಿ ಹೃದಯಾಘಾತ ಹೆಚ್ಚಳ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಇದೀಗ...

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...