Tuesday, January 27, 2026

ಕಮಲ ಜ್ಯೋತಿ ಅಭಿಯಾನ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿಯ ಚೆನ್ನೈತ್ತೋಡಿ ಪಂಚಾಯತ್ ವ್ಯಾಪ್ತಿಯ ಮಾವಿನಕಟ್ಟೆಯಲ್ಲಿ ಕಮಲ ಜ್ಯೋತಿ ಅಭಿಯಾನ ನಡೆಯಿತು . ಸರ್ವರಿಗೆ ಸಮಪಾಲು ಸರ್ವರಿಗೆ ಸಮ ಬಾಳು ಕಲ್ಪನೆಯ ಕೇಂದ್ರ ಸರ್ಕಾರದ ಸಂಕಲ್ಪ ಲೋಕಸಭಾ ಸದಸ್ಯರಾದ ನಳಿನ್ ಕುಮಾರು ಕಟೀಲ್ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಅಧಿಕಾರ ಅವಧಿಯಲ್ಲಿ ಸುಮಾರು ೧೫೩ ವಿವಿಧ ಜನಪರ ಯೋಜನೆಗಳು ಮತ್ತು ಐತಿಹಾಸಿಕ ತಿರ್ಮಾನಗಳನ್ನು ಸಕಾರಗೊಳಿಸಿ ಭವಿಷ್ಯದಲ್ಲಿ ಪ್ರತಿಯೊಬ್ಬ ಪ್ರಜೆಯು ತನ್ನ ಬದುಕಿನಲ್ಲಿ ನಿಟ್ಟುಸಿರು ಬಿಟ್ಟು ಜೀವನ ಸಾಗಿಸುವುದರ ಮುಖಾಂತರ ಎಲ್ಲಾ ಭಾರತೀಯರಿಗೆ ಸಮಪಾಲು ಸಮಬಾಳು ಕಲ್ಪಿಸುವುದೇ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರ ಸಂಕಲ್ಪ ಎಂದು ನಳಿನ್ ಕುಮಾರು ಕಟೀಲ್ ಹೇಳಿದರು. ನಂತರ ಮೋದಿ ಅಭಿಮನ ಬಳಗದಿಂದ ಯಕ್ಷಗಾನ ನಡಿಯಿತು. ಮತ್ತು ಮೋದಿ ಟೀ ಸ್ಟಾಲ್‌ನಿಂದ ಶಾಸಕರಾದ ರಾಜೇಶ್ ನಾಯ್ಕ್, ಹಾಗೂ ಕ್ಷೇತ್ರದ ಅಧ್ಯಕ್ಷರಾದ ದೇವದಾಸ ಶೆಟ್ಟಿ, ಜಿಲ್ಲಾ ಪಂ ಸದಸ್ಯರಾರ ತುಂಗಪ್ಪ ಬಂಗೇರ ಉದ್ಗಾಟನೆ ಮಾಡಿ ಎಲ್ಲಾ ಕಲಾಭಿಮಾನಿಗಳಿಗೆ ಟೀ ವಿತರಿಸಲಾಯಿತ್ತು. ಮತ್ತು ಚಿದಾನಂದ ಅವರು ಮೋದಿ ಚಿತ್ರಣ ಬಿಡಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಸಹವಕ್ತಾರೆಯಾದ ಸುಲೋಚನಾ ಜಿ.ಕೆ ಭಟ್ ಕಾರ್ಯಕ್ರಮವನ್ನು ಸ್ವಾಗತಿಸಿ ವಂದಿಸಿದರು, ಜಿಲ್ಲಾ ವಕ್ತಾರರಾದ ಹರಿಕೃಷ್ಣ ಬಂಟ್ವಾಳ, ತಾಲೂಕು ಪಂ ಸದಸ್ಯರಾದ ಪ್ರಭಾಕರ್ ಪ್ರಭು, ರಮೇಶ್ ಕುಡ್ಮೇರು, ಸಂಗಬೆಟ್ಟು ಶಕ್ತಿಕೇಂದ್ರ ಅಧ್ಯಕ್ಷರಾದ ರತ್ನಕುಮಾರ್ ಚೌಟ, ಕ್ಷೇತ್ರದ ಉಪಾಧ್ಯಕ್ಷರಾದ ವಿಜಯ ರೈ, ಹಾಗೂ ಕೃಷ್ಣ ಅಲಿಯಾಸ್ ಮೋದಿ ಭಟ್ ಉಡುಪಿ, ಮಂಡಲದ ಪ್ರ.ಕಾರ್ಯದರ್ಶಿಯಾದ ಚಂದ್ರಶೇಖರ ಶೆಟ್ಟಿ, ಪ್ರಮುಖರಾದ ಶೇಖರ್ ಮತ್ತು ಜಗದೀಶ ಶೆಟ್ಟಿ ಮುತಾಂದವರು ಉಪಸ್ಥಿತರಿದ್ದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...