Sunday, July 13, 2025

ಜಸ್ಟೀಸ್ ಫಾರ್ ಮಧು

ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳದ ವತಿಯಿಂದ ರಾಯಚೂರು ನಗರದ ನವೋದಯ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಹತ್ಯೆಯ ಕುರಿತುಮಧುವಿನ ಸಾವಿನ ನ್ಯಾಯಕ್ಕಾಗಿ ಆಗ್ರಹಿಸಿ ಹಾಗೂ ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ದುಃಖ ಮರೆಸುವ ಶಕ್ತಿಯನ್ನು ನೀಡಲಿ ಎಂದು ಎಬಿವಿಪಿ ಬಂಟ್ವಾಳ ವತಿಯಿಂದ ಸಂತಾಪ ಸೂಚಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್ ನ ಹಿರಿಯ ಕಾರ್ಯಕರ್ತರಾದ ಸುದಿತ್ ಶೆಟ್ಟಿ ಹಾಗೂ ಅ.ಭಾ.ವಿ.ಪ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ನಾಯಕರಾದ ಮನು ದೇವ್ ನೆರೆದ ವಿದ್ಯಾರ್ಥಿ ಸಮೂಹವನ್ನುದ್ದೇಶಿಸಿ ಮಾತುಗಳನ್ನಾಡಿದರು.
ಈ ಸಂದರ್ಭದಲ್ಲಿ ಅ.ಭಾ.ವಿ.ಪ ಮಂಗಳೂರು ಜಿಲ್ಲಾ ಸಂಚಾಲಕರಾದ ಆಶಿಶ್ ಅಜ್ಜಿಬೆಟ್ಟು , ತಾಲ್ಲೂಕು ಸಂಚಾಲಕರಾದ ದೀರಜ್ ಸಹಸಂಚಾಲಕರಾದ ಶ್ರೀನಿಧಿ , ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಹರ್ಷಿತ್ ಕೊಯಿಲ ,ನಗರ ಕಾರ್ಯದರ್ಶಿ ಪ್ರತೀಕ್ ಹಾಗೂ ವಿದ್ಯಾರ್ಥಿ ಪ್ರಮುಖರಾದ ಅಖಿಲಾಶ್ ,ಪ್ರತೀಕ್ ನೂಜಿಪಾಡಿ, ಭರತ್, ಅಭಿಲಾಶ್, ಅಭಿನ್, ವಿಜಯ್ ಉಪಸ್ಥಿತರಿದ್ದರು.

More from the blog

ರಾಮಕೃಷ್ಣ ತಪೋವನದಲ್ಲಿ ಗುರುಪೂರ್ಣಿಮೆ ಆಚರಣೆ..

ಪೊಳಲಿ: ವ್ಯಾಸ ಪೂರ್ಣಿಮೆಯನ್ನು ಗುರುಪೂರ್ಣಿಮೆಯಂದು ಹಿಂದಿನಿAದಲು ಜಗತಿನಾಧ್ಯಂತ ಆಚರಣೆಯನ್ನು ಮಠ ಆಶ್ರಮಗಳಲ್ಲಿ ಆಚರಿಸುತ್ತ ಬಂದಿರುತ್ತಾರೆ. ಹಿಂದುಗಳಿಗಲ್ಲದೆ ಬೇರೆ ಸಾಂಪ್ರದಾಯದವರಿಗೂ ವೀಶೇಷ ಗುರುಪೂರ್ಣಿಮೆದಿನವಾಗಿರುತ್ತದೆ ಎಂದು ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮಿಜಿಯವರು...

ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

ಕೈಕಂಬ: ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜು ೬ರಂದು ಭಾನುವಾರ ಪುಂಚಮೆ ಶ್ರೀ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರತಿಭಾನ್ವಿತರಾದ ಪೊಳಲಿ...

ನೆಟ್ಲಮುಡ್ನೂರು : ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಜನಜಾಗೃತಿ ಅಭಿಯಾನ..

ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ "ಜನಜಾಗೃತಿ ಅಭಿಯಾನ" ನೇರಳಕಟ್ಟೆಯಲ್ಲಿ ಶನಿವಾರ ಸಂಜೆ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾಜಿ ಸಚಿವ...

ಶಕ್ತಿ ಯೋಜನೆಯ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದೆ – ಭರತ್ ಮುಂಡೋಡಿ..

ಬಂಟ್ವಾಳ: ಬಡವರ ಉದ್ಧಾರ, ಮಹಿಳಾ ಸ್ವಾವಲಂಬನೆಯ ದೃಷ್ಟಿಯಿಂದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದ.ಕ.ಜಿಲ್ಲೆಯಲ್ಲಿ ಯೋಜನೆಯಿಂದ ಹೊರಗುಳಿದ ಫಲಾನುಭವಿಗಳನ್ನು ಯೋಜನಾ ವ್ಯಾಪ್ತಿಗೆ ತರಲಾಗಿದೆ. ಪ್ರಸ್ತುತ ಶಕ್ತಿ ಯೋಜನೆಯ...