Tuesday, July 1, 2025

ಸಿದ್ಧಕಟ್ಟೆ : ಎ.ಬಿ.ವಿ.ಪಿ.ಯಿಂದ ಕಾರ್ಗಿಲ್ ವಿಜಯ ದಿವಸ.

ಕಾರ್ಗಿಲ್ ವಿಜಯ ದಿವಸಕ್ಕೆ 20 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಿದ್ಧಕಟ್ಟೆ ಘಟಕದ ಸದಸ್ಯರು ನಿವೃತ್ತ ಯೋಧ ಮೋಹನ್ ಜಿ ಮೂಲ್ಯ, ಸಂಗಬೆಟ್ಟು ಇವರ ಮನೆಗೆ ಭೇಟಿ ನೀಡಿ ಸನ್ಮಾನಿಸಿ, ಗೌರವಿಸಿದರು.
ಮಾಜಿ ತಾಲೂಕು ಪಂಚಾಯತ್ ಸದಸ್ಯ ರತ್ನಕುಮಾರ್ ಚೌಟ, ಎಬಿವಿಪಿ ಸಿದ್ಧಕಟ್ಟೆ ಘಟಕದ ಅಧ್ಯಕ್ಷ ಗುರುಪ್ರಸಾದ್, ಸಂಗಬೆಟ್ಟು ಗ್ರಾಮ ಪಂಚಾಯತ್ ಸದಸ್ಯ ಸುರೇಶ್ ಕೆ ಕುಲಾಲ್ ಹಾಗೂ ಬಿಜೆಪಿ ಕಾರ್ಯಕರ್ತ ಭೋ ಜ ಶೆಟ್ಟಿಗಾರ್ ಸಂಗಬೆಟ್ಟು, ಸನ್ಮಾನವನ್ನು ನೆರವೇರಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಮೋಹನ್ ಜಿ ಮೂಲ್ಯ, ಸೈನ್ಯದಲ್ಲಿ ಸೇವೆ ಮಾಡುವ ಅವಕಾಶ ಲಭಿಸಿದ್ದು ನನ್ನ ಜೀವನದ ಅತೀ ದೊಡ್ಡ ಭಾಗ್ಯ ಎಂದರು. ಸೈನ್ಯದಲ್ಲಿ ಏಕ ರೀತಿಯ ಮನೋಭಾವ, ಚಿಂತನೆ ಮತ್ತು ಉದ್ದೇಶ ವನ್ನು ಹೊಂದಿರುವುದರಿಂದ ಯಾವುದೇ ರೀತಿಯ ಸಮಸ್ಯೆ, ಕಷ್ಟಗಳು ಉದ್ಭವಿಸುವುದಿಲ್ಲ. ಹೊಸ ರೀತಿಯ ಹುಮ್ಮಸು ನಿತ್ಯ ನಿರಂತರವಾಗಿ ಇರುತ್ತದೆ. ಯುವ ಪೀಳಿಗೆಯು ಸೈನ್ಯದತ್ತ ಹೆಚ್ಚು ಒಲವು ನೀಡಬೇಕು ಎಂದರು. ಮಾಜಿ ತಾಲೂಕು ಪಂಚಾಯತ್ ಸದಸ್ಯ ರತ್ನಕುಮಾರ್ ಚೌಟ ಮಾತನಾಡಿ, ದೇಶ ಕಾಯುವ ಯೋಧನಿಗೆ ಎಬಿವಿಪಿ ಸಿದ್ಧಕಟ್ಟೆ ಘಟಕವು ಮಾಡಿದ ಸನ್ಮಾನವು ಶ್ಲಾಘನೀಯ, ಮುಂದೆ ಇದೇ ರೀತಿಯಾಗಿ ಸಮಾಜ ಮುಖಿ ಕಾರ್ಯಗಳಿಗೆ ಪ್ರೋತ್ಸಾಹ ನೀಡುವಂತಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮ ದಲ್ಲಿ ಸಂಗಬೆಟ್ಟು ಗ್ರಾಮ ಪಂಚಾಯತ್ ಸದಸ್ಯೆ ವಿಮಲಾ ಮೋಹನ್, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಿದ್ದಕಟ್ಟೆ ಘಟಕದ ಉಪಾಧ್ಯಕ್ಷರಾದ ದಿನೇಶ್, ರಾಜೇಶ್, ಕಾರ್ಯದರ್ಶಿ ದೀಪಕ್,ಸಹ-ಕಾರ್ಯದರ್ಶಿಗಳಾದ ಲಿತೇಶ್, ಕಿರಣ್,ಕಾರ್ಯಕರ್ತರಾದ ಸಂತೋಷ್ ಸೊರ್ನಾಡ್, ಅರುಣ್, ಮನೀಶ್, ಪ್ರದೀಪ್, ರಂಜಿತ್, ಸೂರಾಜ್ ಉಪಸ್ಥಿತರಿದ್ದರು. ಪ್ರಜ್ವಲ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...